More

    T20 World Cup: ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಮನೋಜ್ ತಿವಾರಿ!

    ನವದೆಹಲಿ: ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ 17ನೇ ಆವೃತ್ತಿಯ ಅಂತ್ಯದ ಬೆನ್ನಲ್ಲೇ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಈ ಟೂರ್ನಿ ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಜಂಟಿ ಸಹಯೋಗದಲ್ಲಿ ಆಯೋಜಿಸಲಾಗಿದೆ. ಜೂನ್ 1 ರಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನಕ್ಕಾಗಿ ಎಲ್ಲಾ ತಂಡಗಳು ಮೇ 1 ರೊಳಗೆ ತಮ್ಮ ತಂಡಗಳನ್ನು ಪ್ರಕಟಿಸಬೇಕಿದೆ.

    ಇದನ್ನೂ ಓದಿ: ರಾಹುಲ್ ಗಾಂಧಿ ‘ಒಂದೇ ಏಟಿಗೆ ಬಡತನ ನಿವಾರಣೆ’ ಹೇಳಿಕೆ ವಿರುದ್ಧ ಪ್ರಧಾನಿ ಕಿಡಿ; ಅಜ್ಜಿ ಆಯಿತು, ಈಗ ಮೊಮ್ಮಗನ ಸರದಿ ಎಂದ ಮೋದಿ!

    ಐಪಿಎಲ್‌ 2024 ಟೂರ್ನಿಯಲ್ಲಿ ಆಟಗಾರರು ನೀಡುವ ಪ್ರದರ್ಶನದ ಮೇಲೆ ಬಿಸಿಸಿಐ ಸೆಲೆಕ್ಟರ್ಸ್‌ ಹದ್ದಿನ ಕಣ್ಣಿಟ್ಟಿದ್ದಾರೆ. ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದವರನ್ನು ಐಸಿಸಿ ಟೂರ್ನಿಯಲ್ಲಿ ಆಡುವ ಅವಕಾಶ ಪಡೆಯಬಹುದು. ಅದಾಗಿಯೂ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

    T20 World Cup: ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಮನೋಜ್ ತಿವಾರಿ!

    ಸಿಎಸ್​ಕೆ ತಂಡ ಪರ ಆಡುತ್ತಿರುವ ಶಿವಂ ದುಬೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದಿದ್ದರೆ ಅದಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ನೇರ ಹೊಣೆಯಾಗಲಿದೆ ಎಂದು ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಅಚ್ಚರಿಕೆ ಹೇಳಿಕೆ ನೀಡಿದ್ದಾರೆ.

    T20 World Cup: ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಮನೋಜ್ ತಿವಾರಿ!

    ಶಿವಂ ದುಬೆ ಬಗ್ಗೆ ಮಾತನಾಡಿರುವ ತಿವಾರಿ, ಟಿ20 ವಿಶ್ವಕಪ್ ಆಡಬೇಕಾದೆ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಉತ್ತಮ ಆಲೌರೌಂಡರ್ ಆಟ ಆಡಬೇಕಾಗುತ್ತದೆ. ಉತ್ತಮ ಬೌಲಿಂಗ್ ಮಾಡಬೇಕಾಗುತ್ತದೆ. ಆದರೆ ಹಾರ್ದಿಕ್​ ಉತ್ತಮ ಪ್ರದರ್ಶನ ನೀಡಿಲ್ಲ. ಹೀಗಾಗಿ ಇದೇ ರೀತಿ ಮುಂದುವರಿದರೆ ಬಹುಶಃ ವಿಶ್ವಕಪ್‌ನಲ್ಲಿ ಹಾರ್ದಿಕ್​ ಪಾಂಡ್ಯ ಅವರಿಗೆ ಅವಕಾಶ ಸಿಗುವುದಿಲ್ಲ. ಈ ಫಾರ್ಮ್‌ನೊಂದಿಗೆ, ಹಾರ್ದಿಕ್ ಅನ್ನು T20 ವಿಶ್ವಕಪ್‌ನಲ್ಲಿ ಆಯ್ಕೆ ಮಾಡಲಾಗುವುದಿಲ್ಲ.

    T20 World Cup: ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಮನೋಜ್ ತಿವಾರಿ!

    ಏಕೆಂದರೆ ಅಜಿತ್ ಅಗರ್ಕರ್ ಅಲೆದು ತೂಗಿ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಪ್ರಸಿದ್ಧಿಯಾಗಿದ್ದಾರೆ. ಆಗ ಹಾರ್ದಿಕ್​ ಬದಲಿಗೆ ದುಬೆಗೆ ವಿಶ್ವಕಪ್‌ನಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ. ಆದರೆ ಶಿವಂ ದುಬೆಗೆ ಅವಕಾಶ ಸಿಗದಿದ್ದರೆ ಅದಕ್ಕೆ ಸಿಎಂಕೆ ನೇರ ಹೊಣೆಯಾಗಲಿದೆ ಎಂದಿದ್ದಾರೆ.

    ಬೌಲಿಂಗ್ ಮಾಡಲು ಹಾರ್ದಿಕ್​ಗೆ ಅವಕಾಶ ನೀಡುತ್ತಿಲ್ಲವಾದ್ದರಿಂದ ನಾನು ಇದನ್ನು ಸಾಕಷ್ಟು ಸಲ ಹೇಳಿದ್ದೇನೆ. ನಿಮಗೆ ಹಾರ್ದಿಕ್ ಬದಲಿ ಆಟಗಾರ ಬೇಕಾದರೆ, ಶಿವಂ ದುಬೆಯನ್ನು ಸಿದ್ಧಗೊಳಿಸಿ ಎಂದು ಬಿಸಿಸಿಐಗೆ ತಿವಾರಿ ಸಲಹೆ ನೀಡಿದ್ದಾರೆ.

    ಇದು ಬರೀ ಟ್ರೈಲರ್ ಅಷ್ಟೇ..; ನಟ ಸಲ್ಮಾನ್ ಮನೆ ಮೇಲೆ ದಾಳಿ ಹೊಣೆ ಹೊತ್ತ ಬಿಷ್ಣೋಯಿ ಗ್ಯಾಂಗ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts