ತಮಿಳುನಾಡು: ತಡರಾತ್ರಿ ಇಬ್ಬರು ಪ್ರೇಮಿಗಳು ಮಾತನಾಡುತ್ತಾ ನಿಂತಿದ್ದ ವೇಳೆ ಅಲ್ಲಿಗೆ ಬಂದ ಮೂವರು ದುಷ್ಕರ್ಮಿಗಳು, ಸ್ನೇಹಿತನ ಎದುರೇ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಕಡಲೂರಿನ ಕಮ್ಮಿಯಂಪೆಟ್ಟೈ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಅಲ್ಲದೇ ಆರೋಪಿಗಳು ಮೊಬೈಲ್ನಲ್ಲಿ ಪ್ರೇಮಿಗಳ ಫೋಟೋ ತೆಗೆದು ಬೆದರಿಕೆ ಹಾಕಿ, ಅತ್ಯಾಚಾರ ಎಸಗಿದ್ದಾರೆ. ಈ ವಿಷಯವನ್ನು ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮುಂದೆ ಯುವತಿ ಹೇಳಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ.
ತನಿಖೆ ಚುರುಕುಗೊಳಿಸಿದ ಪೊಲೀಸರು ಆರೋಪಿಗಳಾದ ಕಿಶೋರ್ (19), ಸತೀಶ್ (19) ಹಾಗೂ ಆರೀಫ್ (18) ನನ್ನು ಬಂಧನ ಮಾಡಲಾಗಿದ್ದು, ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಯುವತಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವೈದ್ಯಕೀಯ ಚಿಕಿತ್ಸೆಗೊಳಪಡಿಸಲಾಗಿದೆ.
ಎಮ್ಮೆ, ನಾಯಿ ವಿಚಾರಕ್ಕೆ ಅತ್ತೆ-ಸೊಸೆ ಜಗಳ… ಇಷ್ಟಕ್ಕೆ ದುಡುಕಿದ್ರಾ ಶಂಕ್ರಣ್ಣ?