More

    ದ.ಕ. ಜಿಲ್ಲೆಯಲ್ಲಿ ನಾಳೆಯಿಂದ ಕರ್ಫ್ಯೂ ಇನ್ನಷ್ಟು ಕಟ್ಟುನಿಟ್ಟು

    ಮಂಗಳೂರು: ಕರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೇ 7ರಿಂದ ಕರ್ಫ್ಯುವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

    ಮೇ 7ರಿಂದ ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. 10ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. ಮೆಡಿಕಲ್ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಶಾಪ್‌ಗಷ್ಟೆ ಹೋಗಲು ಅವಕಾಶ. ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಮುಟ್ಟುಗೋಲು ಹಾಗೂ ಜನರ ಅನಗತ್ಯ ಓಡಾಟಕ್ಕೆ ತಡೆಹಾಕಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

    ಕಾರ್ಯಕ್ರಮಗಳಿಗೂ ಇಲ್ಲ ಅವಕಾಶ: ಮೇ 15ರ ಬಳಿಕ ಯಾವ ಕಾರ್ಯಕ್ರಮಗಳಿಗೂ ಅವಕಾಶ ಇಲ್ಲ. ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮವನ್ನೂ ಮಾಡುವಂತಿಲ್ಲ. ಈಗಾಗಲೇ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೂ ಇದು ಅನ್ವಯ. ಈಗಾಗಲೇ ನಿಗದಿಯಾಗಿರುವ ಕಾರ್ಯಕ್ರಮಗಳನ್ನು ಆಯೋಜಕರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts