ದಾವಣೆಗೆರೆ: ವಿದ್ಯುತ್ ಕಂಬದ ಮೇಲೆ ಹತ್ತಿ ವಿದ್ಯುತ್ ತಂತಿ ದುರಸ್ತಿ ಮಾಡಲು ಹೊರಟಿದ್ದ ಲೈನ್ ಮ್ಯಾನ್ಗಳಿಗೆ ವಿದ್ಯುತ್ ತಗುಲಿರುವ ಘಟನೆ ದಾವಣಗೆರೆಯ ಹರಿಹರದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಲೈನ್ ಮ್ಯಾನ್ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ: ರೈತ ಹೋರಾಟದಲ್ಲಿ ಕಾರಿಗೆ ಬೆಂಕಿ; ಹೋರಾಟಗಾರನ ಸಜೀವ ದಹನ
ಬೆಸ್ಕಾಂನ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಲೈನ್ ಮ್ಯಾನ್ಗಳು ಭಾನುವಾರ ಹರಿಹರದ ಪಟೇಲ್ ಬಡವಾಣೆಯ ಸಾಯಿಬಾಬ ಮಂದಿರದ ಬಳಿ ವಿದ್ಯುತ್ ತಂತಿ ದುರಸ್ಥಿ ಮಾಡುತ್ತಿದ್ದರು. ಈ ವೇಳೆ ಅಚಾನಕ್ಕಾಗಿ ತಂತಿಯಲ್ಲಿ ವಿದ್ಯುತ್ ಹರಿದಿದೆ. ಇದರಿಂದಾಗಿ ಮಾರುತಿ (24) ಹೆಸರಿನ ಲೈನ್ ಮ್ಯಾನ್ ಮೃತಪಟ್ಟಿದ್ದು, ಮಹೇಶ್ (34) ಸ್ಥಿತಿ ಗಂಭೀರವಾಗಿದೆ. ಇವರಿಬ್ಬರು ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದ ನಿವಾಸಿಗಳು. ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯಿಂದಲೇ ಈ ಘಟನೆ ನಡೆದಿರಬಹುದಾದ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗಲೇ ವಿದ್ಯುತ್ ತಗುಲಿ ಶವವಾಗಿರುವ ದೃಶ್ಯ ಸೆರೆಯಾಗಿದೆ.
ಇದನ್ನೂ ಓದಿ: ಹೆಲ್ಮೆಟ್ ಹಾಕಿದ್ರೂ ಇನ್ಮುಂದೆ ಕಟ್ಟಬೇಕಾಗಬಹುದು ದಂಡ! ಏಕೆ ಗೊತ್ತಾ?
ಕಳೆದ 15 ದಿನಗಳಿಂದ ಈ ಭಾಗದಲ್ಲಿ ಕೆಲಸ ಮಾಡಲಾಗುತ್ತಿದೆ. ಎಲ್ಲ ರೀತಿಯ ರಕ್ಷಣಾ ಸಾಮಾಗ್ರಿಯನ್ನು ಕೊಡಲಾಗಿತ್ತು. ಲೈನ್ ಕೂಡ ಕ್ಲಿಯರ್ ಮಾಡಿ ಕೊಡಲಾಗಿತ್ತು. ಆದರೆ ಅವರು ರಕ್ಷಣಾ ಸಾಮಾಗ್ರಿಗಳನ್ನು ಧರಿಸಿರಲಿಲ್ಲ. ಯಾರದ್ದೋ ಮನೆಯ ಯುಪಿಎಸ್ ಅಥವಾ ಬೇರೆ ಏನೋ ತಾಂತ್ರಿಕ ದೋಷದಿಂದ ಈ ಘಟನೆ ಸಂಭವಿಸಿರಬಹುದು. ಇದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಸಿಸ್ಟೆಂಟ್ ಇಂಜಿನಿಯರ್ ಆಗಿರುವ ರಾಘವೇಂದ್ರ ಅವರು ತಿಳಿಸಿದ್ದಾರೆ.
ಲಾಡ್ಜ್ಗೆ ಬರುವಾಗ ಇಬ್ಬರು, ಹೋಗುವಾಗ ಒಬ್ಬನೇ: ಮುಚ್ಚಿದ್ದ ಕೊಠಡಿ ತೆರೆದವರಿಗೆ ಕಾದಿತ್ತು ಶಾಕ್!