More

    ಅತಿಥಿ ಉಪನ್ಯಾಸಕರ ನೇಮಿಸಿ

    ಚಿಕ್ಕಮಗಳೂರು: ರಾಜ್ಯದ ಸರ್ಕಾರಿ ವಸತಿ ನಿಲಯಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಅಗತ್ಯದಷ್ಟು ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು ಎಂದು ಒತ್ತಾಯಿಸಿ ಬುಧವಾರ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

    ನಗರ ಹೊರವಲಯದ ಕೆಎಂ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ನಂತರ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮೂಲಕ ಉಪ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

    ಕರೊನಾ ಕಾರಣದಿಂದ ಹಲವು ತಿಂಗಳು ಆನ್​ಲೈನ್ ಮೂಲಕ ಶೈಕ್ಷಣಿಕ ಚಟುವಟಿಕೆ ನಡೆಸಿವೆಯಾದರೂ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿಂದ ಪಠ್ಯಕ್ರಮಗಳು ಸಾಕಷ್ಟು ಪ್ರಮಾಣದಲ್ಲಿ ನಡೆಯದಿರುವುದರಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ತೊಂದರೆಯಾಗಿದೆ. ಕರೊನಾ ನಂತರ ರಾಜ್ಯದ ಎಲ್ಲ ಸರ್ಕಾರಿ ಕಾಲೇಜುಗಳಿಗೆ ಇದೂವರೆಗೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ರಾಜ್ಯದ ಎಲ್ಲ ಕಾಲೇಜುಗಳಿಗೆ ತಕ್ಷಣದಿಂದ ಅತಿಥಿ ಉಪನ್ಯಾಸಕರನ್ನು ನೇಮಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕಾರಿಯಾಗುವಂತೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಎಬಿವಿಪಿ ರಾಜ್ಯ ಸಮಿತಿ ಸದಸ್ಯ ಗುರು ಮಾತನಾಡಿ, ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳ ಆರಂಭಗೊಂಡರೂ ಸರ್ಕಾರಿ ವಸತಿ ನಿಲಯಗಳಲ್ಲಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನಿರಾಕರಿಸುತ್ತಿದೆ. ಇದರಿಂದ ವಸತಿ ನಿಲಯವನ್ನೇ ಅವಲಂಬಿಸಿರುವ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕೂಡಲೇ ಎಲ್ಲ ವಿದ್ಯಾರ್ಥಿಗಳಿಗೂ ಪ್ರವೇಶಾತಿ ನೀಡಬೇಕು ಎಂದರು. ರಾಜ್ಯ ಸಮಿತಿ ಸದಸ್ಯ ಮನು, ನಗರ ಕಾರ್ಯದರ್ಶಿ ತುಳಸಿ, ದರ್ಶನ್, ಮನೋಜ್, ಚಂದನ, ವಿಶ್ರಾಂತ್, ಶಶಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts