blank

ಸಿಇಟಿಯಲ್ಲಿ ಜನಿವಾರ ಕಟ್: ಬ್ರಾಹ್ಮಣ ಸಮಾಜದ ಆಕ್ರೋಶ

akbms

ಶಿವಮೊಗ್ಗ: ಕಟ್ಟುನಿಟ್ಟಾಗಿ ಸಿಇಟಿ ಪರೀಕ್ಷೆ ನಡೆಸುವ ಭರದಲ್ಲಿ ಪರೀಕ್ಷಾ ಸಿಬ್ಬಂದಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟು ಮಾಡಿದ್ದಾರೆ. ಬ್ರಾಹ್ಮನ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ತೆಗೆಸಿ ಪರೀಕ್ಷಾ ಕೇಂದ್ರದೊಳಕ್ಕೆ ಬಿಡಲಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಪ್ರಮುಖರು ಆರೋಪಿಸಿದ್ದಾರೆ.

blank

ಈ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರನ್ನು ಭೇಟಿಯಾದ ಬ್ರಾಹ್ಮಣ ಸಮಾಜದ ಮುಖಂಡರು, ಏ.16ರಂದು ಸಿಇಟಿ ಪರೀಕ್ಷೆಗೆ ಆಗಮಿಸಿದ್ದ ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿದ ಪರೀಕ್ಷಾ ಕೇಂದ್ರದ ಸಿಬ್ಬಂದಿ ಬ್ರಾಹ್ಮಣ ಸಮುದಾಯದವರ ಜನಿವಾರಗಳನ್ನು ಒತ್ತಾಯಪೂರ್ವಕವಾಗಿ ತೆಗೆಸಿದ್ದಾರೆ. ಇದು ಧಾರ್ಮಿಕ ಭಾವನೆಗಳ ಮೇಲೆ ಮಾಡಿದ ಪ್ರಹಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅನೇಕ ಪಾಲಕರು ಈ ಸಂಬಂಧ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ದೀಕ್ಷೆಯ ಭಾಗವಾಗಿರುವ ಜನಿವಾರವನ್ನು ತೆಗೆಸಿರುವುದು ಅಕ್ಷಮ್ಯ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಯಲ್ಲಿ ಲೋಹದ ಸರಗಳನ್ನು ಬಳಸಬಾರದು ಎಂದಿದೆ. ಆದರೆ ಸಿಬ್ಬಂದಿ ಜನಿವಾರವನ್ನೂ ಬಿಟ್ಟಿಲ್ಲ. ಇದೊಂದು ಧರ್ಮ ವಿರೋಧಿ ಕೃತ್ಯವಾಗಿದೆ. ಹಿಂದು ಪರಂಪರೆಯ ಸಂಸ್ಕಾರವನ್ನು ಪಾಲಿಸುತ್ತಿದ್ದ ವಿದ್ಯಾರ್ಥಿಗಳಿಗೆ ಆಘಾತವಾಗಿದೆ ಎಂದರು.
ಪರೀಕ್ಷೆ ಬರೆಯಲು ಮಾನಸಿಕವಾಗಿ ಸಜ್ಜಾಗಿ ಬಂದಿದ್ದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಹೊರಗೆ ನಡೆದ ಘಟನೆಯಿಂದ ಆತಂಕಗೊಂಡಿದ್ದಾರೆ. ಇದರಿಂದಾಗಿ ಅವರು ಸಮಪರ್ಕವಾಗಿ ಪರೀಕ್ಷೆಯಲ್ಲಿ ಉತ್ತರಿಸಲು ಸಾಧ್ಯವಾಗಿಲ್ಲ. ಅವರ ಭವಿಷ್ಯದ ಮೇಲೆ ಈ ಘಟನೆ ಗಂಭೀರ ಪರಿಣಾಮ ಬೀರಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಬ್ರಾಹ್ಮಣ ಮುಖಂಡರ ದೂರು ಆಲಿಸಿದ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕೆಇಎ ಮಾರ್ಗಸೂಚಿ ಹೊರತುಪಡಿಸಿ ಪರೀಕ್ಷಾ ಕೇಂದ್ರದ ಯಾವುದೇ ಸಿಬ್ಬಂದಿ ಆಕ್ಷೇಪಾರ್ಹ ಕ್ರಮ ಕೈಗೊಂಡಿದ್ದರೆ ಸೂಕ್ತ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಎಕೆಬಿಎಂಎಸ್ ಜಿಲ್ಲಾ ಪ್ರತಿನಿಧಿ ಎನ್.ಎಂ.ರಘುರಾಮ್, ಎಕಬಿಎಂಎಸ್ ಜಿಲ್ಲಾಧ್ಯಕ್ಷ ಕೆ.ಸಿ.ನಟರಾಜ ಭಾಗವತ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಸೂಡಾ ಮಾಜಿ ಅಧ್ಯಕ್ಷ ಎಸ್.ದತ್ತಾತ್ರಿ, ನಗರಸಭೆ ಮಾಜಿ ಅಧ್ಯಕ್ಷ ಎಂ.ಶಂಕರ್ ಮುಂತಾದವರಿದ್ದರು.
ಪರೀಕ್ಷಾ ಕೇಂದ್ರಕ್ಕೆ ಭೇಟಿ:ಇದಕ್ಕೂ ಮುನ್ನ ಜನಿವಾರ ತೆಗೆಸಲಾಗಿತ್ತು ಎಂಬ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಕೆ.ಬಿ.ಪ್ರಸನ್ನಕುಮಾರ್, ಎಸ್.ದತ್ತಾತ್ರಿ, ಎಂ.ಶಂಕರ್ ಮುಂತಾದವರು ಭದ್ರತೆಗೆ ನಿಯೋಜಿಸಲ್ಪಟ್ಟಿದ್ದ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಯಾವ ಆಧಾರದಲ್ಲಿ ನೀರು ಜನಿವಾರ ತೆಗೆಸಿದ್ದೀರಿ ಎಂದು ಪ್ರಶ್ನಿಸಿದರು. ಅಂತಹ ಕೃತ್ಯ ನಡೆದೇ ಇಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಲು ಮುಂದಾದರು. ಆದರೆ ಇದಕ್ಕೆ ತಣ್ಣಗಾಗದ ಬ್ರಾಹ್ಮಣ ಸಮಾಜದ ಮುಖಂಡರು, ಹಿಂದು ಧರ್ಮಕ್ಕೆ ಅಪಮಾನ ಮಾಡಿದ ಕೃತ್ಯವನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪರೀಕ್ಷಾ ಕೇಂದ್ರದ ಯಡವಟ್ಟು: ಈ ಬಾರಿ ಸಿಇಟಿಯಲ್ಲಿ ಶಿವಮೊಗ್ಗದ ಕೆಲ ಪರೀಕ್ಷಾ ಕೇಂದ್ರದಲ್ಲಿ ಅನೇಕ ಯಡವಟ್ಟುಗಳಾಗಿವೆ. ಪರೀಕ್ಷಾರ್ಥಿಗಳ ತಪಾಸಣೆ ನಡೆಸಿ ಒಳಗೆ ಬಿಡುವ ಸಂದರ್ಭದಲ್ಲಿ ಸಿಬ್ಬಂದಿ ಅನೇಕ ಲೋಪಗಳನ್ನು ಮಾಡಿದ್ದಾರೆ. ಕೆಇಎ ಮಾರ್ಗಸೂಚಿಗೂ ಸಿಬ್ಬಂದಿ ನಡೆದುಕೊಂಡಿದ್ದಕ್ಕೂ ಸಂಬಂಧವೇ ಇರಲಿಲ್ಲ. ಬೆಲ್ಟ್ ಇರುವ ಚಪ್ಪಲಿಗಳನ್ನು ಪರೀಕ್ಷಾ ಕೇಂದ್ರದೊಳಕ್ಕೆ ಹಾಕಿಕೊಂಡು ಹೋಗುವಂತಿಲ್ಲ ಎಂದು ಮಾರ್ಗಸೂಚಿಯಿದೆ. ಆದರೆ ಸಿಬ್ಬಂದಿ ಅಂತಹ ಚಪ್ಪಲಿ ಧರಿಸಿ ಒಳಗೆ ಹೋಗಲು ಕೆಲವರಿಗೆ ಅವಕಾಶ ನೀಡಿದ್ದಾರೆ. ಸಾಮಾನ್ಯ ಚಪ್ಪಲಿಗಳನ್ನು ಹೊರಗಿ ಬಿಡಿಸಿದ್ದಾರೆ. ಕರವಸ್ತ್ರ ಕೊಂಡೊಯ್ಯುವಂತಿಲ್ಲ. ಆದರೆ ಕೆಲವರಿಗೆ ಕರವಸ್ತ್ರ ತೆಗೆದುಕೊಂಡು ಹೋಗಲು ಅವಕಾಶ ನೀಡಿದ್ದಾರೆ. ತಪಾಸಣೆಗೆ ನಿಯೋಜನೆಗೊಂಡವರು ಆ ಕ್ಷಣಕ್ಕೆ ತಮಗೆ ಸರಿ ಎನಿಸಿದ್ದನ್ನು ಮಾಡಿದ್ದಾರಷ್ಟೇ.

Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…