ಬೆಂಗಳೂರು: ಡಿಜೆ ಹಳ್ಳಿ ಗಲಭೆ ಕೇಸ್ ಸಂಬಂಧಿಸಿ ಕೋರ್ಟ್ ಸರ್ಚ್ ವಾರೆಂಟ್ನೊಂದಿಗೆ ಬೆಂಗಳೂರಿನ ಮೂರು ಕಡೆಗಳಲ್ಲಿರುವ ಎಸ್ಡಿಪಿಐ ಕಚೇರಿಗಳಿಗೆ ದಾಳಿ ನಡೆಸಿ ಅಲ್ಲಿದ್ದ ಕಂಪ್ಯೂಟರ್ ಮತ್ತು ಇತರೆ ವಸ್ತುಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಸಿಸಿಬಿಯ ಒಸಿಡಬ್ಲ್ಯು ವಿಂಗ್ನ ಎಸಿಪಿ ಜಗನ್ನಾಥ ರೈ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳು ಈ ದಾಳಿಯನ್ನು ನಡೆಸಿವೆ. ದಾಳಿ ನಡೆಸಿದ ಸಂದರ್ಭದಲ್ಲಿ ಕಚೇರಿಗಳಲ್ಲಿ ಸಿಬ್ಬಂದಿ ಹಾಜರಿದ್ದರು. ಕಚೇರಿಯಲ್ಲಿದ್ದ ಕಡತಗಳನ್ನು ಪರಿಶೀಲಿಸಿದ ತಂಡ ಎಲ್ಲವನ್ನೂ ತಮ್ಮ ವಶಕ್ಕೆ ತೆಗೆದುಕೊಂಡಿದೆ.
ಇದನ್ನೂ ಓದಿ: VIDEO| ಡಿಜೆ ಹಳ್ಳಿ ಠಾಣೆಗೆ ಬೆಂಕಿ ಹಚ್ಚುವ ಮುನ್ನ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ!
ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಎಸ್ಡಿಪಿಐ ಕೈವಾಡ ಇರುವ ಬಗ್ಗೆ ಆರೋಪಗಳು ಕೇಳಿದ್ದವು. ಈ ಹಿನ್ನೆಲೆಯಲ್ಲಿ ಸರ್ಚ್ ವಾರೆಂಟ್ ಪಡೆದ ಸಿಸಿಬಿ ತಂಡ ಹಲಸೂರು ಗೇಟ್ ಸಮೀಪದ ಎಸ್ಡಿಪಿಐ ಕೇಂದ್ರ ಕಚೇರಿ, ಡಿಜೆಹಳ್ಳಿ, ಕೆಜೆಹಳ್ಳಿ ಎಸ್ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. (ದಿಗ್ವಿಜಯ ನ್ಯೂಸ್)
ಗಲಭೆಯ ನಡುವೆ ನವೀನ್ ಅನ್ನು ಮುಗಿಸೋಕೆ ಸ್ಕೆಚ್ ರೂಪಿಸಿದ್ರು ಡಿಜೆ ಹಳ್ಳಿ ಗಲಭೆಕೋರರು!