More

    ಸಿದ್ದರಾಮಯ್ಯ ಸೋಲಲಿ ಎಂದು ಡಿ.ಕೆ.ಶಿವಕುಮಾರ್ ಹೋಮ ಮಾಡಿಸಿದ್ದಾರೆ: ಸಿ.ಟಿ.ರವಿ

    ದಾವಣಗೆರೆ: ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಪರವಾಗಿ ದಾವಣಗೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ಹೊಸ ಬಾಂಬ್​ವೊಂದನ್ನು ಸಿಡಿಸಿದ್ದಾರೆ.

    ಇದನ್ನೂ ಓದಿ: ಜನಸಂಖ್ಯೆ ಸಂಪತ್ತೋ ಆಪತ್ತೋ?; ಭಾರತ ಈಗ ಅತ್ಯಧಿಕ ಜನಸಂಖ್ಯೆಯ ದೇಶ

    ದಾವಣಗೆರೆಯ ಚನ್ನಗಿರಿಯಲ್ಲಿ ಮಾತನಾಡಿದ ಸಿ.ಟಿ.ರವಿ, ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಂದು ಹೋಮ ಮಾಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಲಿ ಎಂದು ಆ ಹೋಮದಲ್ಲಿ ಡಿ.ಕೆ.ಶಿವಕುಮಾರ್ ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ನಕ್ಕರೆ ಕಣ್ಣೀರೂ ಆನಂದಬಾಷ್ಪ!; ನಗುವಿನಿಂದ ಅಂದ-ಆನಂದ-ಆಹ್ಲಾದ

    ಇದು ನನಗೆ ಬಂದ ಇಂಟೆಲಿಜೆನ್ಸ್ ಮಾಹಿತಿ ಎಂದಿರುವ ರವಿ, ಇದನ್ನು ನೀವು ಯಾರಿಗೂ ಹೇಳಬೇಡಿ ಎಂದು ನಾನು ಹೇಳುವುದಿಲ್ಲ ಎಂಬುದಾಗಿಯೂ ಹೇಳಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ವಿಚಾರವಾಗಿ ಮಾತನಾಡಿದ ರವಿ, ಮಾಡಾಳ್ ವಿರೂಪಾಕ್ಷಪ್ಪ ನಮ್ಮ ಪಕ್ಷದ ಮಾಜಿ ಶಾಸಕರು, ಈಗ ನಮ್ಮ ಪಕ್ಷದ ಅಭ್ಯರ್ಥಿ ಶಿವಕುಮಾರ್, ನಾನು ಶಿವಕುಮಾರ್ ಪರ ಮತಯಾಚನೆ ಮಾಡಿದ್ದೇನೆ, ನಮ್ಮ ಕಾರ್ಯಕರ್ತರಿಗೆ ಏನು ಸಂದೇಶ ಕೊಡಬೇಕೋ ಅದನ್ನು ಕೊಟ್ಟಿದ್ದೇನೆ ಎಂದು ಹೇಳಿದರು.

    ಈ ಚುನಾವಣೆ ಬಿಜೆಪಿ ವರ್ಸಸ್ ಕಾಂಗ್ರೆಸ್​ ಅಲ್ಲ, ಇದು ಬಜರಂಗಿ ವರ್ಸಸ್ ತಾಲಿಬಾನ್: ಸಿ.ಟಿ.ರವಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts