More

    ಜಗದೀಶ್ ಶೆಟ್ಟರ್, ಸವದಿ ಕಾಂಗ್ರೆಸ್‌ಗೆ ಬಂದ ಮೇಲೆ‌ 150 ಸ್ಥಾನ ಗೆಲ್ಲುವುದು ಖಚಿತವಾಗಿದೆ: ಡಿಕೆಶಿ

    ಬೆಂಗಳೂರು: ನಾವು 141 ಸ್ಥಾನಗಳು ಗೆಲ್ಲುವುದಿತ್ತು. ಜಗದೀಶ್ ಶೆಟ್ಟರ್, ಸವದಿ ಕಾಂಗ್ರೆಸ್‌ಗೆ ಬಂದ ಮೇಲೆ‌ ನಾವು 150 ಸ್ಥಾನ ಗೆಲ್ಲುವುದು ಖಚಿತವಾಗಿದೆ. ಅವರಿಂದ ರಾಜ್ಯದಲ್ಲಿ ವೀರಶೈವರ ಮತಗಳು ಎರಡರಿಂದ ಮೂರರಷ್ಟು ಬರುತ್ತವೆ ಎಂದು ಹೇಳುವ ಮೂಲಕವಾಗಿ ಡಿ.ಕೆ.ಶಿವಕುಮಾರ್ ಅವರು ಈ ಬಾರಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

    ಚಾಮರಾಜನಗರದಿಂದ ಬೀದರ್​ವರೆಗೂ ಅವರ ಅಭಿಮಾನಿಗಳು ಕಾಂಗ್ರೆಸ್‌ಗೆ ಶಿಫ್ಟ್ ಆಗುತ್ತಿದ್ದಾರೆ‌. ನಾನು ಬಿಜೆಪಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ ಕೊಡುತ್ತಿದ್ದೇನೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಭ್ರಷ್ಟಾಚಾರವನ್ನು ಹೊಡೆದು ಓಡಿಸುವ ದಿನ ಬರುತ್ತಾ ಇದೆ ಎಂದಿದ್ದಾರೆ.

    ಇದನ್ನೂ ಓದಿ: ನನಗೆ ವಿಧಾನಸಭೆ ಟಿಕೆಟ್ ತಪ್ಪಲು ಬಿ. ಎಲ್. ಸಂತೋಷ್ ಅವರೇ ಕಾರಣ; ಕಣ್ಣೀರು ಹಾಕಿದ ಜಗದೀಶ್ ಶೆಟ್ಟರ್
    ಬಿಜೆಪಿ- ಜೆಡಿಎಸ್‌ನ ಕಾರ್ಯಕರ್ತರು ಕಾಂಗ್ರೆಸ್ ಬರಲಿ. ಸ್ಥಳೀಯವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿ. ಯಾರಾದರೂ ನಮ್ಮ ನಮ್ಮ ಸಿದ್ಧಾಂತ ಒಪ್ಪಿಕೊಂಡರೆ ಸೇರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ನನಗೆ ವಿಧಾನಸಭೆ ಟಿಕೆಟ್ ತಪ್ಪಲು ಬಿ. ಎಲ್. ಸಂತೋಷ್ ಅವರೇ ಕಾರಣ; ಕಣ್ಣೀರು ಹಾಕಿದ ಜಗದೀಶ್ ಶೆಟ್ಟರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts