ವಾರಂಗಲ್: ಉಂಗುರ ಕಳೆದುಕೊಂಡಿದ್ದಕ್ಕೆ ಯುವತಿಯೊಬ್ಬಳು ಸಾವಿನ ಹಾದಿ ಹಿಡಿದಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಾರಂಗಲ್ನಲ್ಲಿ ಕಳೆದ ಮಂಗಳವಾರ (ಮಾ.28) ನಡೆದಿದೆ.
ಮಾದುಲ ಹೇಮಲತಾ ರೆಡ್ಡಿ (19) ಮೃತ ಯುವತಿ. ಈಕೆ ವಾರಂಗಲ್ನ ಗುನ್ನೆಪಲ್ಲಿ ಗ್ರಾಮದವಳು. ಹನುಮಕೊಂಡದ ಡಿಗ್ರಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದಳು.
ಇದನ್ನೂ ಓದಿ: 25ನೇ ಸಿನಿಮಾ ರಿಲೀಸ್ ಶುಭ ಸಂದರ್ಭದಲ್ಲಿ 1 ಕೋಟಿ ರೂ. ಬೆಲೆಬಾಳುವ ಕಾರಿಗೆ ಒಡೆಯನಾದ ಡಾಲಿ!
ಹೇಮಲತಾ ಯುಗಾದಿಗೆಂದು ಮನೆಗೆ ಬಂದಿದ್ದಳು. ಈ ವೇಳೆ ಆಕೆ ತಂದೆ ಕೊಡಿಸಿದ ಚಿನ್ನದ ಉಂಗುರವನ್ನು ಕಳೆದುಕೊಂಡಿದ್ದಳು. ಪಾಲಕರು ಬೈತಾರೆ ಎಂಬ ಭಯದಿಂದ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಡೆತ್ನೋಟ್ ಬರೆದಿಟ್ಟು ಹೇಮಲತಾ ಸಾವಿನ ಹಾದಿ ಹಿಡಿದಿದ್ದಾಳೆ. ಕ್ಷುಲಕ ಕಾರಣಕ್ಕೆ ಹೇಮಲತಾ ದುಡುಕಿನ ನಿರ್ಧಾರ ತೆಗೆದುಕೊಂಡಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.
ಮೃತ ಹೇಮಲತಾ ಅವರು ತಂದೆ ಮಾದುಲ ಜಾನಕಿರಾಮುಲು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಎಸ್ಎಸ್ಐ ಕುಚುಪುಡಿ ಜಗದೀಶ್ ಹೇಳಿದ್ದಾರೆ. (ಏಜೆನ್ಸೀಸ್)
ತವರಿನಲ್ಲೇ ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ಸ್: 8 ಮಂದಿ AAP ಕಾರ್ಯಕರ್ತರ ಬಂಧನ
ಅಕಟಕಟಾ ನಟಿಯಿಂದ ಇಂಥಾ ಮಾತಾ! ರಾತ್ರಿ ಪ್ರಯಾಣ ಮಾಡುವಾಗ ಈ ರೀತಿ ಮಾಡ್ತಾರಂತೆ ನಿಮಿಷಾ