More

    ಪ್ರಕೃತಿ ವಿಕೋಪ ತಡೆಗೆ ಕ್ರಮ ವಿಪತ್ತು ಪರಿಹಾರ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ

    ಮಂಗಳೂರು: ಮಳೆಗಾಲದಲ್ಲಿ ಪ್ರಕೃತಿ ವಿಕೋಪ ಸಂದರ್ಭಆಗಬಹುದಾದ ಅವಘಡಗಳ ಬಗ್ಗೆ ನಿಗಾ ವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.


    ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಕುಡಿಯುವ ನೀರು ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.
    ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮಳೆಯ ಕಾರಣದಿಂದ ವಿದ್ಯುತ್ ಸಮಸ್ಯೆಗಳು ಉಂಟಾಗದಂತೆ ಮೆಸ್ಕಾಂ ಮುಂಜಾಗ್ರತಾ ಕ್ರಮ ವಹಿಸಬೇಕು. ವಿದ್ಯುತ್ ಸಮಸ್ಯೆ ಉಂಟಾದ 6 ಗಂಟೆಯ ಒಳಗೆ ಪರಿಹಾರ ಒದಗಿಸಬೇಕು. ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಕಂಟ್ರೋಲ್ ರೂಮ್‌ಗಳನ್ನು ತೆರೆಯಬೇಕು. ಮಲೆನಾಡು ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಬಗ್ಗೆ ಹೆಚ್ಚಿನ ಗಮನಹರಿಸಿ ತಕ್ಷಣ ಸರಿಪಡಿಸಿ ಅಗತ್ಯ ಕ್ರಮವಹಿಸಿ ಎಂದರು.


    ಕುಡಿಯುವ ನೀರಿನ ಬಗ್ಗೆ ಮಾತನಾಡಿದ ಅವರು ಈಗಾಗಲೇ ಕೆಲವು ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ಅನಾವಶ್ಯಕ ಉದ್ದೇಶಗಳಿಗೆ ನೀರು ಪೋಲಾಗುವುದನ್ನು ತಪ್ಪಿಸಲು ಕ್ರಮವಹಿಸಿ ಅಂತವರ ವಿರುದ್ಧ ದಂಡ ವಿಧಿಸಬೇಕು. ಟ್ಯಾಂಕರ್‌ಗಳಿಂದ ಸರಬರಾಜಾಗುತ್ತಿರುವ ನೀರು ಹಾಗೂ ನೀರಿನ ಮೂಲಗಳು ಶುದ್ಧವಾಗಿದೆ ಎಂಬುದನ್ನು ಕಡ್ಡಾಯವಾಗಿ ಪರೀಕ್ಷೆ ಮಾಡಿಸಲು ಕ್ರಮ ತೆಗೆದುಕೊಳ್ಳುವಂತೆ ಹೇಳಿದರು.


    ಮುಂಗಾರು ಪೂರ್ವದಲ್ಲಿಯೇ ಡಂಪಿಂಗ್ ಯಾರ್ಡ್, ಕಸ ವಿಲೇವಾರಿ ಪ್ರದೇಶಗಳನ್ನು ಸ್ವಚ್ಛಗೊಳಿಸಬೇಕು. ಇಂತಹ ಪ್ರದೇಶಗಳಲ್ಲಿ ಕೃತಕ ನೆರೆ ಉಂಟಾಗದಂತೆ ಮುಂಜಾಗ್ರತ ಕ್ರಮ ವಹಿಸಬೇಕು. ಅಧಿಕಾರಿಗಳು ಕೂಡಲೇ ಅಂತಹ ಪ್ರದೇಶಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
    ಡೆಂೆ, ಮಲೇರಿಯಾ ಮುಂತಾದ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮ ವಹಿಸುವುದರ ಜೊತೆಗೆ ಚಿಕಿತ್ಸೆ ಒದಗಿಸಲು ನಿಗಾ ವಹಿಸಬೇಕು. ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ದಳದವರು ಜಂಟಿಯಾಗಿ ಮಾತುಕತೆ ನಡೆಸಿ ಮರದ ರೆಂಬೆ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲಿ ಉಂಟಾಗುವ ಅಪಾಯವನ್ನು ತಡೆಗಟ್ಟಬೇಕು.


    ಮರ ಬಿದ್ದು ರಸ್ತೆ ಬ್ಲಾಕ್ ಆದ ಸಂದರ್ಭಕೂಡಲೇ ಬದಲಿವ್ಯವಸ್ಥೆಯನ್ನು ಮಾಡಬೇಕು. ಗ್ರಾಪಂ ಹಾಗೂ ತಾಲೂಕು ಮಟ್ಟದಲ್ಲಿ ಅಗ್ನಿಶಾಮಕ ದಳದಿಂದ ಸಿಬ್ಬಂದಿಯನ್ನು ನಿಯೋಜಿಸಬೇಕು. ಸಮಸ್ಯೆಗಳು ಉಂಟಾದಲ್ಲಿ ಸ್ಥಳಿಯಮಟ್ಟದಲ್ಲಿ ಶೀಘ್ರವಾಗಿ ಬಗೆಹರಿಸಬೇಕು ಎಂದರು


    ಗೂಗಲ್‌ನಲ್ಲಿ ಮಾಹಿತಿ
    ಚಾರ್ಮಾಡಿ ಘಾಟಿ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಪ್ರದೇಶಗಳನ್ನು ರಾಷ್ಟ್ರೀಯ ಹೆದ್ದಾರಿಯವರು ಪಟ್ಟಿ ಮಾಡಬೇಕು. ಘಾಟಿ ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಅಡೆತಡೆ ಉಂಟಾದ ಬಗ್ಗೆ ಗೂಗಲ್ ನ ಮುಖಾಂತರ ಮಾಹಿತಿ ಜನರಿಗೆ ತಲುಪುವ ವ್ಯವಸ್ಥೆ ಆಗಬೇಕು. ರಸ್ತೆ ಕಡಿತ ಉಂಟಾದರೆ ಪರ್ಯಾಯ ರಸ್ತೆಗಳ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು. ಹೆದ್ದಾರಿಗಳಲ್ಲಿ ಭೂಕುಸಿತ ಉಂಟಾದಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದರು.


    ಮೀನುಗಾರರ ರಕ್ಷಣೆಗೆ ಕ್ರಮ
    ಮಳೆಯ ಸಂದರ್ಭ ಮೀನುಗಾರಿಕೆಗೆ ಹೋಗದಂತೆ ಮೀನುಗಾರರಿಗೆ ಮುಂಜಾಗ್ರತಾ ಕ್ರಮಗಳ ಸಭೆಯನ್ನು ನಡೆಸಬೇಕು. ್ಲ ಅಪಾಯಕ್ಕೆ ಸಿಲುಕಿದ ಮೀನುಗಾರರನ್ನು ರಕ್ಷಿಸಲು ತಂಡಗಳನ್ನು ಸಿದ್ಧಪಡಿಸಬೇಕು. ಕೋಸ್ಟ್ ಗಾರ್ಡ್‌ನಿಂದಲೂ ಸಿಬ್ಬಂದಿ ಒದಗಿಸಬೇಕು. ಮೀನುಗಾರರ ವಾಟ್ಸಾಪ್ ಗ್ರೂಪ್ ಗಳನ್ನು ರಚಿಸಿ ಮಾಹಿತಿರವಾನಿಸುವ ಕೆಲಸವಾಗಬೇಕು ಎಂದು ಮೀನುಗಾರಿಕಾ ಇಲಾಖೆಗೆ ಸೂಚಿಸಿದರು.


    ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆನಂದ್ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಮನಪಾ ಆಯುಕ್ತ ಆನಂದ್, ಡಿಸಿಪಿ ಸಿದ್ದಾರ್ಥ್ ಗೋಯಲ್, ಡಿ ಸಿ ಎಫ್ ಆಂಟೋನಿ, ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮೋಹ ಪಾತ್ರ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts