More

    ಕಳ್ಳತನ ಶಂಕೆ; ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

    ಹೈದರಾಬಾದ್​: ತಮ್ಮ ಮನೆಯಲ್ಲಿ ಸಾಕಲಾಗಿದ್ದ ಮೇಕೆಗಳನ್ನು ಕದ್ದಿದ್ದಾರೆ ಎಂದು ಶಂಕೆಯ ಮೇರೆಗೆ ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ಯುವಕರನ್ನು ಅಮಾನುಷವಾಗಿ ಥಳಿಸಿರುವ ಘಟನೆ ತೆಲಂಗಾಣದ ಮಂಚಿರಿಯಾಲ್​ ಜಿಲ್ಲೆಯಲ್ಲಿ ನಡೆದಿದೆ.

    ಪ್ರಕರಣ ಸಂಬಂಧ ಪೊಲೀಸರು ಕೊಮುರಾಜುಲು ರಾಮುಲು, ಸ್ವರೂಪ ಮತ್ತು ಶ್ರೀನಿವಾಸ್​ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಸಂತ್ರಸ್ತರಾದ ತೇಜ ಹಾಗೂ ಚಿಲುಮುಲ ಕಿರಣ್​ ಇಬ್ಬರು ಕುರಿಗಾಹಿ ಕೆಲಸ ಮಾಡುತ್ತಿದ್ದು, ರಾಮುಲು ಅವರು ಸಾಕಿದ್ದ ಮೇಕೆ ಕಾಣೆಯಾಗಿದೆ. ಶಂಕೆಯ ಮೇರೆಗೆ ತೇಜ ಹಾಗೂ ಕಿರಣ್​ನನ್ನು ತಮ್ಮ ಮನೆಗೆ ಕರೆಸಿ ಏಕಾಏಕಿ ಅವರನ್ನು ದನದ ಕೊಟ್ಟಿಗೆಯಲ್ಲಿ ಉಲ್ಟಾ ನೇತು ಹಾಕಿ ರಾಮುಲು ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

    ಇದನ್ನೂ ಓದಿ: ಸಹೋದರಿಯರ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ಎಸಗಿದ ದುರುಳರು; ಬಿಜೆಪಿ ನಾಯಕನ ಪುತ್ರ ಸೇರಿದಂತೆ 10 ಮಂದಿ ಅರೆಸ್ಟ್​

    ಬಂಧಿತ ಆರೋಪಿಗಳು ಹಲ್ಲೆ ನಡೆಸುವ ವೇಳೆ ಸಂತ್ರಸ್ತರಿಬ್ಬರ ಮೇಲೆ ಖಾರದಪುಡಿ ಎರಚಿ ಮೆಣಸಿನಕಾಯಿಯ ಹೊಗೆಯನ್ನು ಹಾಕಿ ನಿಜವನ್ನು ಒಪ್ಪಿಕೊಳ್ಳುವಂತೆ ಬಲವಂತ ಮಾಡಿದ್ದಾರೆ. ಇದಲ್ಲದೆ ಹಲ್ಲೆ ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್​ ಮಾಡಿ ವಿಕೃತಿ ಮೆರೆದಿದ್ದಾರೆ.

    ಘಟನೆ ಸಂಬಂಧ ಬಂಧಿತ ಆರೋಪಿಗಳ ವಿರುದ್ಧ ಜಾತಿ ನಿಂದನೆ ಹಾಗೂ ಕೊಲೆ ಯತ್ನ ಅಡಿ ದೂರು ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಿದ್ದಪಡಿಸಲಾಗಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿ ಮಾಹಿತಿ ನೀಡಿದ್ಧಾರೆ.

    ಹಲ್ಲೆ ಪ್ರಕರಣವು ತೆಲಂಗಾಣ ರಾಜಕೀಯದಲ್ಲಿ ಗದ್ದಲವನ್ನು ಎಬ್ಬಿಸಿದ್ದು, ಆಡಳಿತರೂಢ ಬಿಆರ್​ಎಸ್​ ಹಾಗೂ ವಿಪಕ್ಷಗಳಾದ ಬಿಜೆಪಿ, ಕಾಂಗ್ರೆಸ್​ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ಧಾರೆ. ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ಈ ಪ್ರಕರಣ ಗಂಭೀರ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts