ದೌರ್ಜನ್ಯ ನಡೆಸಿದವರ ವಿರುದ್ಧ ಕ್ರಮವಾಗಲಿ: ದಸಂಸ ಮೈಸೂರು ವಿಭಾಗೀಯ ಸಂಚಾಲಕ ಶಿವರಾಜ್ ಒತ್ತಾಯ

Dalit Sangharsh Samiti press conference Mandya

ಮಂಡ್ಯ: ವಿಜಯಪುರ ಜಿಲ್ಲೆಯಲ್ಲಿ ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ದೌರ್ಜನ್ಯವೆಸಗಿದವರ ಆಸ್ತಿ ಮುಟ್ಟುಗೋಲು ಹಾಕಿ ಗಾಯಗೊಂಡವರ ವೈದ್ಯಕೀಯ ವೆಚ್ಚ ಭರಿಸಿ, ಪರಿಹಾರ ನೀಡಲು ಸರ್ಕಾರ ಮುಂದಾಗಬೇಕು ಎಂದು ದಲಿತ ಸಂಘರ್ಷ ಸಮಿತಿ ಮೈಸೂರು ವಿಭಾಗೀಯ ಸಂಚಾಲಕ ಶಿವರಾಜ್ ಒತ್ತಾಯಿಸಿದರು.
ಇಟ್ಟಿಗೆ ಕಾರ್ಖಾನೆಯ ಮಾಲೀಕ ತನ್ನ ಕಾರ್ಮಿಕರ ಮೇಲೆ ನಡುರಸ್ತೆಯಲ್ಲೇ ಹಲ್ಲೆ ಮಾಡಿರುವ ಪ್ರಕರಣವನ್ನು ದಸಂಸ ತೀವ್ರವಾಗಿ ಖಂಡಿಸುತ್ತದೆ. ಆರೋಪಿಗಳ ವಿರುದ್ಧ ಗುಂಡಾಕಾಯ್ದೆ ದಾಖಲಿಸಬೇಕು. ಆತನ ಕಾರ್ಖಾನೆಗೆ ಸರ್ಕಾರದಿಂದಲೇ ಬೀಗ ಜಡಿಯಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ದಲಿತರ ಮೇಲೆ ಈ ರೀತಿಯ ದೌರ್ಜನ್ಯಗಳು ನಡೆದಲ್ಲಿ ಆರೋಪಿಗಳು 6 ತಿಂಗಳು ನ್ಯಾಯಾಲಯಕ್ಕೆ ಯಾವುದೇ ರೀತಿಯ ಅರ್ಜಿ ಸಲ್ಲಿಸದಂತೆ ಕಾನೂನು ತಿದ್ದುಪಡಿ ಮಾಡಬೇಕು. ಮಾದಿಗ ಸಮುದಾಯದ ಮೇಲೆ ಕೆಟ್ಟ ಮನಸ್ಥಿತಿಯಿಂದ ನಡೆದುಕೊಳ್ಳುವ ವಿರುದ್ಧ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ತಾಲೂಕು ಸಂಚಾಲಕ ಪ್ರಕಾಶ್, ಶೇಖರ್, ಪುಟ್ಟಲಿಂಗಯ್ಯ, ಕೆ.ಸಿ.ರವಿಕುಮಾರ್ ಇದ್ದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…