ತಾನು ಓದಿದ ಶಾಲೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದ ದಲಿತ ಯುವಕನಿಗೆ ಥಳಿತ; ಚುನಾವಣಾ ಕರ್ತವ್ಯ ನೆಪವೊಡ್ಡಿ ಆರೋಪಿಗಳನ್ನು ಬಂಧಿಸದ ಪೊಲೀಸರು

ಚೆನ್ನೈ: ತಾನು ಓದಿದ ಶಾಲೆಯ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ದಲಿತ ಸಮುದಾಯದ ಯುವಕನನ್ನು ಅಮಾನುಷವಾಗಿ ಥಳಿಸಿರುವ ಘಟನೆ ತಮಿಳುನಾಡಿದ ತಿರುಪ್ಪೂರು ಜಿಲ್ಲೆಯ ಅಮರಾವತಿಪಾಳ್ಯಂನಲ್ಲಿ ನಡೆದಿದೆ. ಹಲ್ಲೆಗೊಳಗಾದ ಶ್ಯಾಮ್​ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ತಿರುಪ್ಪೂರು ಮೆಡಿಕಲ್ ಕಾಲೇಜು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಕಾರ್ತಿಕ್ ಹಾಗೂ ಬಾಲಸುಬ್ರಮಣಿಯಂ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್​ 22ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಟ್ಟಿಂಗ್​ ವ್ಯಾಮೋಹಕ್ಕೆ ಬಿದ್ದು 1.5 ಕೋಟಿ ರೂ. ಕಳೆದುಕೊಂಡ … Continue reading ತಾನು ಓದಿದ ಶಾಲೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದ ದಲಿತ ಯುವಕನಿಗೆ ಥಳಿತ; ಚುನಾವಣಾ ಕರ್ತವ್ಯ ನೆಪವೊಡ್ಡಿ ಆರೋಪಿಗಳನ್ನು ಬಂಧಿಸದ ಪೊಲೀಸರು