ಬೆಂಗಳೂರು: ಜಾಹೀರಾತು ನೀಡುವ ಬಗ್ಗೆ ಮಾತನಾಡುವ ಭರದಲ್ಲಿ ಸ್ಯಾಂಡಲ್ವುಡ್ ಸ್ಟಾರ್ ದರ್ಶನ್ ತೂಗುದೀಪ್ ಅವರ ಬಗ್ಗೆ ಜಗ್ಗೇಶ್ ಮಾತನಾಡಿರುವ ಆಡಿಯೋ ಎನ್ನಲಾದ ಆಡಿಯೋ ಕ್ಲಿಪ್ ಒಂದು ಹರಿದಾಡಿದ್ದು, ಅದರಿಂದಲೇ ನವರಸ ನಾಯಕ ಜಗ್ಗೇಶ್ ಪೇಚಿಗೆ ಸಿಲುಕುವಂತಾಗಿದೆ. ನೆಚ್ಚಿನ ನಾಯಕನ ಬಗ್ಗೆ ಕೆಟ್ಟದಾಗಿ ಮಾತನಾಡಿದ ಜಗ್ಗೇಶ್ಗೆ ದರ್ಶನ್ ಅಭಿಮಾನಿಗಳು ಸಿನಿಮಾ ಸೆಟ್ನಲ್ಲೇ ಬೆವರಳಿಸಿದ್ದಾರೆ.
ಇತ್ತೀಚೆಗೆ ಜಗ್ಗೇಶ್ ಅವರ ಧ್ವನಿ ಎನ್ನಲಾದ ಆಡಿಯೋ ಒಂದು ಹರಿದಾಡಿದೆ. ಅದರಲ್ಲಿ ಅವರು ದರ್ಶನ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ರೆಕಾರ್ಡ್ ಆಗಿದೆ. ಸಿನಿಮಾದ ನಿರ್ಮಾಪಕರೊಬ್ಬರೊಂದಿಗೆ ಜಗ್ಗೇಶ್ ಮಾತನಾಡಿದ್ದ ಆ ಆಡಿಯೋ ಕ್ಲಿಪ್ ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಸದ್ಯ ಜಗ್ಗೇಶ್ ಅವರು ತೋತಾಪುರಿ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ. ಸಿನಿಮಾ ಸೆಟ್ಗೆ ದಾಳಿಯಿಟ್ಟಿರುವ ದರ್ಶನ್ ಅಭಿಮಾನಿಗಳು ಜಗ್ಗೇಶ್ಗೆ ಮುತ್ತಿಗೆ ಹಾಕಿದ್ದಾರೆ. ಆದರೆ ಜಗ್ಗೇಶ್ ಮಾತ್ರ ಆ ಆಡಿಯೋ ಕ್ಲಿಪ್ನಲ್ಲಿರುವ ಧ್ವನಿ ತನ್ನದಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದ್ದಾರೆ. ತಾನು ದರ್ಶನ್ ಹೆಸರಿನ ವೆಬ್ ಡಿಸೈನರ್ ಬಗ್ಗೆ ಮಾತನಾಡಿದ್ದು, ಅದನ್ನು ಎಡಿಟ್ ಮಾಡಿ ಈ ರೀತಿ ಆರೋಪ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ರಾಜಕೀಯ ಆರಂಭವಾಗಿದೆ. ಇದೊಂದು ದೊಡ್ಡ ಹುನ್ನಾರ ಎಂದು ಅವರು ಹೇಳಿರುವುದು ಕಂಡುಬಂದಿದೆ. (ದಿಗ್ವಿಜಯ ನ್ಯೂಸ್)
ಡಿ ಬಾಸ್ ಬಗ್ಗೆ ಮಾತನಾಡಿ ಸಮಸ್ಯೆ ಸಿಲುಕಿದ ಜಗ್ಗೇಶ್?
ಸ್ಯಾಂಡಲ್ವುಡ್ನ ಸ್ಟಾರ್ ನಟ ದರ್ಶನ್ ಬಗ್ಗೆ ಜಗ್ಗೇಶ್ ಮಾತನಾಡಿರುವ ಆಡಿಯೋ ಕ್ಲಿಪ್ ಎಂದು ಒಂದು ಆಡಿಯೋ ಕ್ಲಿಪ್ ಹರಿದಾಡುತ್ತಿದ್ದಂತೆಯೇ ಡಿ ಬಾಸ್ ಅಭಿಮಾನಿಗಳು ಜಗ್ಗೇಶ್ ಅಭಿನಯದ ತೋತಾಪುರಿ ಸಿನಿಮಾ ಸೆಟ್ಗೆ ತೆರಳಿ ಜಗ್ಗೇಶ್ಗೆ ಧಮಕಿ ಹಾಕಿರುವ ದೃಶ್ಯವಿದು… pic.twitter.com/BpMlovSETN— Vijayavani (@VVani4U) February 22, 2021
ಮನೆ ಮುಂದೆ ಪಾತ್ರೆ ತೊಳೆಯುತ್ತಿದ್ದ ಮಗಳನ್ನೇ ಕೊಚ್ಚಿ ಕೊಂದ ತಂದೆ: ಪುತ್ರಿ ಮೇಲಿದ್ದ ಕೋಪವಾದ್ರು ಏನು?