ಚಳ್ಳಕೆರೆ ತಾಲೂಕಿನ ದೊಡ್ಡೇರಿಯಲ್ಲಿ ಜಲಕಂಠೇಶ್ವರ ದರ್ಶನ

blank

ಚಳ್ಳಕೆರೆ: ತಾಲೂಕಿನ ದೊಡ್ಡೇರಿ ಗ್ರಾಮದ ನೂತನ ಜಲಕಂಠೇಶ್ವರ ದೇವಸ್ಥಾನದಲ್ಲಿ ಬುಧವಾರ ಮಹಾಶಿವರಾತ್ರಿ ಅಂಗವಾಗಿ ಭಕ್ತರಿಗೆ ವಿಶೇಷ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇವಾಲಯ ನಿರ್ಮಾಣಕಾರ, ನಿವೃತ್ತ ಉಪನ್ಯಾಸಕ ಡಿ.ಎಸ್.ರಾಜಣ್ಣ ಮಾತನಾಡಿ, ಕುಟುಂಬದ ಹಿರಿಯರ ಧಾರ್ಮಿಕ ಪದ್ಧತಿಯಂತೆ ಪೂಜೆ ಆಯೋಜಿಸಲಾಗಿದೆ. ನಮ್ಮ ಹಿರಿಯರ ಹೆಸರಿನಲ್ಲಿ ವೃದ್ಧಾಶ್ರಮ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಕುಟುಂಬದ ಮೂಲ ಜಾಗದಲ್ಲಿ ಜಲಕಂಠೇಶ್ವರ ದೇವಾಲಯ ಮತ್ತು ವೃದ್ಧಾಶ್ರಮ ಕಾರ್ಯ ಈಗಾಗಲೇ ಆರಂಭ ಮಾಡಲಾಗಿದೆ. ದೇವಸ್ಥಾನ ಆವರಣದಲ್ಲಿ ದೊಡ್ಡೇರಿ ಪಾಳೆಗಾರರ ಸಂಸ್ಥಾನದ ಶಿಲಾಶಾಸನಗಳು ಮತ್ತು ದೇವತಾ ವಿಗ್ರಹಗಳನ್ನು ಸಂಗ್ರಹಿಸಿ, ರಕ್ಷಿಸಲಾಗಿದೆ ಎಂದು ತಿಳಿಸಿದರು.

ಸುಮಾರು 9 ಅಡಿ ಎತ್ತರದ ಶಿವನ ವಿಗ್ರಹ ಸ್ಥಾಪಿಸಲಾಗಿದೆ. ಶಿವಲಿಂಗದ ಮೇಲೆ ನೀರಿನ ಕಾರಂಜಿ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಪೂಜೆ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳಿದ್ದು, ಸರ್ವರಿಗೂ ದರ್ಶನ ಇರುತ್ತದೆ ಎಂದು ಹೇಳಿದರು.

ನಮ್ಮ ತಂದೆ ಸ್ವಾತಂತ್ರ್ಯಯೋಧ ದಿ. ಶರಣಬಸವಯ್ಯ ಅವರ ಗೌರವಧನವನ್ನು ನಮ್ಮ ತಾಯಿ ಸರ್ವಮಂಗಳಮ್ಮ ಗ್ರಾಮದ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳಿಗೆ ಬಳಸಿದ್ದಾರೆ. ಇಲ್ಲಿನ ಬಸವೇಶ್ವರ ದೇವಸ್ಥಾನವನ್ನು 12 ಲಕ್ಷ ರೂ. ವೆಚ್ಚದಲ್ಲಿ ಮರು ನಿರ್ಮಿಸಿದ್ದು, 5 ದೇಗುಲಗಳ ಜೀರ್ಣೋದ್ಧಾರ ಮಾಡಲಾಗಿದೆ ಎಂದರು.

ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಮತ್ತು ಪೂಜಾ ಆಚರಣೆಗೆ ಕುಟುಂಬಸ್ಥರಾದ ಶಿವಕುಮಾರ್, ಮಧುಮತಿ, ಶಂಕರ್, ವಿಜಯಮ್ಮ, ಡಿ.ಎಸ್.ರಾಜಣ್ಣ, ಅನುರಾಧಾ ಅವರ ಸಹಕಾರ ಇದೆ ಎಂದು ಹೇಳಿದರು.

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…