More

    ಕಾಟೇರ ಸಕ್ಸಸ್​ ಬೆನ್ನಲ್ಲೇ ವಿರೋಧಿಗಳಿಗೆ ಖಡಕ್​ ಎಚ್ಚರಿಕೆ​ ಕೊಟ್ಟ ನಟ ದರ್ಶನ್

    ಬೆಂಗಳೂರು: ಟಾಲೆಂಜಿಂಗ್​ ಸ್ಟಾರ್​ ದರ್ಶನ್​ ನಟನೆಯ, ತರುಣ್​ ಸುಧೀರ್​ ನಿರ್ದೇಶನದ ಬಹುನಿರೀಕ್ಷಿತ ಕಾಟೇರ ಚಿತ್ರವು ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಕ್ಷಕರಿಂದ ಹಾಗೂ ಸೆಲೆಬ್ರಿಟಿಗಳಿಂದ ಉತ್ತಮ ಪ್ರತಿಕ್ರಿಯೆಗಳನ್ನು ಪಡದುಕೊಳ್ಳುವಲ್ಲಿ ಚಿತ್ರ ಮುಂಚೂಣಿಯಲ್ಲಿದೆ. ಬಿಡುಗಡೆಯಾದ ಒಂದು ವಾರದಲ್ಲೇ ಶತಕೋಟಿ ಕ್ಲಬ್​ ಸೇರಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಶತಕೋಟಿ ಗಳಸಿದ ಖುಷಿಗೆ ಚಿತ್ರತಂಡ ಇತ್ತೀಚಿಗೆ ಸೆಲೆಬ್ರಿಟಿಗಳಿಗಾಗಿ ಪಾರ್ಟಿ ಆಯೋಜಿಸಿ ಸಂಭ್ರಮಿಸಿತ್ತು. ಇದರ ಬೆನ್ನಲ್ಲೇ ನಟ ದರ್ಶನ್​ ಕಾರ್ಯಕ್ರಮದ ನಿಮಿತ್ತ ದುಬೈಗೆ ತೆರಳಿದ್ದರು. ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಅವರು ಕಾಟೇರ ಸಕ್ಸಸ್​ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

    ಇದನ್ನೂ ಓದಿ: ಹುಕ್ಕಾ ನಶೆಯಲ್ಲಿ ಎಂ.ಎಸ್. ಧೋನಿ; ಏನಯ್ಯಾ ನೀನು ಹೀಗೆ ಮಾಡೋದ ಎಂದ್ರು ನೆಟ್ಟಿಗರು

    ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ. ಕಾಲಾಯ ತಸ್ಮಯ್ ನಮಃ ಎಂದು ಟ್ವೀಟ್ ಮಾಡುವ​ ಮೂಲಕ ವಿರೋಧಿಗಳಿಗೆ ಟಾಂಗ್​ ಕೊಟ್ಟಿದ್ದಾರೆ.

    ಈ ಚಿತ್ರದ ಮೂಲಕ ಕನಸಿನ ರಾಣಿ ಮಾಲಾಶ್ರೀ ಅವರ ಪುತ್ರಿ ಆರಾಧನಾ ರಾಮ್​ ಸ್ಯಾಂಡಲ್​ವುಡ್​ಗೆ ಪಾದರ್ಪಣೆ ಮಾಡುತ್ತಿದ್ದು, ಚಿತ್ರದಲ್ಲಿ ಹಿರಿಯ ನಟರಾದ ಬಿರಾದಾರ್, ಜಗಪತಿ ಬಾಬು, ಕುಮಾರ್​ ಗೋವಿಂದ್, ಶೃತಿ ಕೃಷ್ಣ, ಮಾಸ್ಟರ್ ರೋಹಿತ್ ಮತ್ತು ಡ್ಯಾನಿಶ್ ಅಖ್ತರ್ ಸೈಫಿ ನಟಿಸಿದ್ದಾರೆ. ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ, ಸುಧಾಕರ್.ಎಸ್. ರಾಜ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts