ಹುಬ್ಬಳ್ಳಿ : ಇಲ್ಲಿನ ಸಂತೋಷ ನಗರದ ಶಕ್ತಿ ಕಾಲನಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏ. 4ರಂದು ಸಂಜೆ 6 ಗಂಟೆಯಿಂದ ರಾತ್ರಿ 7.30ರವರೆಗೆ ಶೃತಿ ಚಾಟ್ನಿ ಅವರಿಂದ ದಾಸವಾಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮನುಕುಮಾರ ಹಿರೇಮಠ, ರಾಘವೇಂದ್ರ ನಾಕೋಡ ಅವರು ತಬಲಾ ಮತ್ತು ಬದ್ರಿ ಪಾಟೀಲ ಅವರು ಹಾಮೋನಿಯಂ ಸಾಥ್ ನೀಡುವರು ಎಂದು ಶ್ರೀಮಠದ ಅಧ್ಯಕ್ಷ ಗೋವಿಂದಾಚಾರ್ಯರು ತಿಳಿಸಿದ್ದಾರೆ.