More

    ಕರವೇ ಕಾರ್ಯಕರ್ತರ ಬಿಡುಗಡೆಗೆ ಆಗ್ರಹಿಸಿ ರಕ್ತದಲ್ಲಿ ಪತ್ರ ಚಳವಳಿ  

    ದಾವಣಗೆರೆ : ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಕರವೇ ಜಿಲ್ಲಾ ಘಟಕದಿಂದ ನಗರದಲ್ಲಿ ಶುಕ್ರವಾರ ರಕ್ತದಲ್ಲಿ ಪತ್ರ ಬರೆದು ಚಳವಳಿ ನಡೆಸಲಾಯಿತು.
     ನಗರದ ಅಕ್ಕಮಹಾದೇವಿ ರಸ್ತೆಯ ಗುರುಭವನದಲ್ಲಿ ಸೇರಿದ ಕಾರ್ಯಕರ್ತರು ಪತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರವಾನಿಸಿದರು.
     ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ ಮಾತನಾಡಿ, ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಜಾಗೃತಿ ಅಭಿಯಾನ ಸಂದರ್ಭದಲ್ಲಿ ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿ 9 ದಿನ ಕಳೆದಿದ್ದು, ಈವರೆಗೂ ಬಿಡುಗಡೆ ಮಾಡದಿರುವುದು ಖಂಡನೀಯ ಎಂದರು.
     ಸರ್ಕಾರ ತಕ್ಷಣ ರಾಜ್ಯದಲ್ಲಿ ರೈತಪರ  ಹಾಗೂ ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲ ಪ್ರಕರಣ ವಾಪಸ್ ಪಡೆಯಬೇಕು ಮತ್ತು ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
     ಸರ್ಕಾರದ ಆದೇಶದಂತೆ ಶೇ.60 ರಷ್ಟು ಕನ್ನಡ ನಾಮಫಲಕ ಹಾಗೂ ಜಾಹೀರಾತು ಫಲಕ ಹಾಕಬೇಕೆಂದು ಮಹಾನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಆದೇಶ ನೀಡಬೇಕೆಂದು ಒತ್ತಾಯಿಸಿದರು.
     ಗೋಪಾಲ್ ದೇವರಮನಿ, ತನ್ವೀರ್, ಜಬಿವುಲ್ಲಾ, ಆಟೋ ರಫೀಕ್, ಜಿ.ಎಸ್.ಸಂತೋಷ್, ಸುರೇಶ್, ಗುರುಮೂರ್ತಿ, ಸಂಜು, ದಾದಾಪೀರ್, ರವಿಕುಮಾರ್, ಖಾದರ್ ಬಾಷಾ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts