ದಾವಣಗೆರೆ : ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 39.50 ಲಕ್ಷ ರೂ. ಹಣವನ್ನು ನಗರದ ಕೆ.ಆರ್. ರಸ್ತೆಯಲ್ಲಿ ಶನಿವಾರ ವಶಪಡಿಸಿಕೊಳ್ಳಲಾಗಿದೆ.
ಎ್ಎಸ್ಟಿ ತಂಡ ಅಧಿಕಾರಿಗಳು ದ್ವಿಚಕ್ರ ವಾಹನವೊಂದನ್ನು ತಡೆದು ತಪಾಸಣೆ ಮಾಡಿದಾಗ ವ್ಯಕ್ತಿಯೊಬ್ಬರು ಬ್ಯಾಗಿನಲ್ಲಿ ಹಣ ತೆಗೆದುಕೊಂಡು ಹೋಗುತ್ತಿರುವುದು ಪತ್ತೆಯಾಗಿದೆ.
ಆ ಹಣವನ್ನು ಎಟಿಎಂಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ಆ ವ್ಯಕ್ತಿ ತಿಳಿಸಿದ್ದು ಯಾವುದೇ ದಾಖಲೆಗಳನ್ನು ಒದಗಿಸಿಲ್ಲ. ಈ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಆಜಾದ್ ನಗರ ಠಾಣೆ ಪೊಲೀಸರು, ಆದಾಯ ತೆರಿಗೆ ಅಧಿಕಾರಿಗಳು ಭೇಟಿ ನೀಡಿದ್ದರು.
…