ಸದಸ್ಯತ್ವ ಹೆಚ್ಚಳದಿಂದ ಪಕ್ಷಕ್ಕೆ ಬಲ

blank

ದಾವಣಗೆರೆ : ಸದಸ್ಯತ್ವ ಹೆಚ್ಚಳಕ್ಕೆ ಒತ್ತು ಕೊಡುವ ಮೂಲಕ ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು.  ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ, ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಸಭೆಯಲ್ಲಿ ಮಾತನಾಡಿ, 4 ತಿಂಗಳಿಂದ ದೇಶಾದ್ಯಂತ ಆನ್‌ಲೈನ್ ಸದಸ್ಯತ್ವ ಅಭಿಯಾನ ಶುರುವಾಗಿದೆ. ಹೆಚ್ಚು ಮಹಿಳೆಯರನ್ನು ಪಕ್ಷಕ್ಕೆ ಕರೆತರುವ ಮೂಲಕ ಶಕ್ತಿ ತುಂಬಬೇಕು ಎಂದು ತಿಳಿಸಿದರು.  ಬೂತ್ ಮತ್ತು ವಾರ್ಡ್ ಮಟ್ಟದಲ್ಲಿ ಜನರೊಂದಿಗೆ ಬೆರೆಯಬೇಕು. ಅವರ ಸಮಸ್ಯೆಗಳಿಗೆ ಧ್ವನಿಯಾಗುವುದರಿಂದ ನಿಮ್ಮಲ್ಲಿ ನಾಯಕತ್ವ ಬೆಳೆಯುತ್ತದೆ. ಮುಂದಿನ ದಿನಗಳಲ್ಲಿ ಅದು ಫಲ ನೀಡುತ್ತದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಮಹಾನಗರ ಪಾಲಿಕೆ ಇನ್ನಿತರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂದರ್ಭದಲ್ಲಿ ಅವಕಾಶ ಗಿಟ್ಟಿಸಲು ದಾರಿಯಾಗುತ್ತದೆ ಎಂದು ಕಿವಿಮಾತು ಹೇಳಿದರು.  ತೊಟ್ಟಿಲು ತೂಗುವ ಕೈ ದೇಶವನ್ನು ಆಳಬಹುದು ಎಂಬಂತೆ ಮಹಿಳೆಯರಲ್ಲಿ ಆಡಳಿತ ನಡೆಸುವ ಸಾಮರ್ಥ್ಯವಿದೆ. ಸಮಾಜದಲ್ಲಿ ನಾವು ಶೇ. 50 ರಷ್ಟಿದ್ದೇವೆ. ಅದಕ್ಕೆ ತಕ್ಕಂತೆ ಸ್ಥಾನಮಾನ ಸಿಕ್ಕಿಲ್ಲ. ವಿಧಾನಸಭೆಗೆ ಹೆಚ್ಚು ಮಹಿಳೆಯರು ಆಯ್ಕೆಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.  ಅಮೆರಿಕದಲ್ಲಿ ಮಹಿಳೆಯರು ಒಮ್ಮೆಯೂ ಅಧ್ಯಕ್ಷರಾಗಿ ಆಯ್ಕೆಯಾಗಿಲ್ಲ. ಆ ದೇಶದಲ್ಲಿ ಮಹಿಳೆಯರಿಗೆ ತಡವಾಗಿ ಮತದಾನದ ಹಕ್ಕು ಸಿಕ್ಕಿತು. ಆದರೆ ನಮ್ಮಲ್ಲಿ ಸಮಾನತೆಯಿದೆ. ಸಿಕ್ಕ ಅವಕಾಶಗಳನ್ನು ಬೆಳವಣಿಗೆಗೆ ಉಪಯೋಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.  ಸರ್ಕಾರದ ಪಂಚ ಗ್ಯಾರಂಟಿಗಳಿಂದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದೆ. ಗೃಹಲಕ್ಷ್ಮೀ ಹಣ ಮಹಿಳೆಯರ ಬದುಕಿಗೆ ಆಸರೆಯಾಗಿದೆ. ಸ್ವಾಭಿಮಾನದ ಜೀವನ ಸಾಗಿಸುವಂತಾಗಿದೆ. ಅವರು ಮನೆ ಕಟ್ಟಿಕೊಳ್ಳಲು, ಕೊಳವೆಬಾವಿ ಕೊರೆಸಲು ಅನುಕೂಲವಾಗಿದೆ ಎಂದು ತಿಳಿಸಿದರು.  ಮಹಿಳಾ ಘಟಕದ ಸದಸ್ಯರು ಸಂವಿಧಾನವನ್ನು ಓದಿಕೊಳ್ಳಬೇಕು. ಅದರಲ್ಲಿ ಅಡಕವಾಗಿರುವ ಭ್ರಾತೃತ್ವ, ಸಮಾನತೆ ತತ್ವಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.  ಜಗಳೂರು ಶಾಸಕ ಬಿ. ದೇವೇಂದ್ರಪ್ಪ ಮಾತನಾಡಿ, ಪುರುಷರಿಗಿಂತ ಮಹಿಳೆಯರು ಕಡಿಮೆ ಇಲ್ಲ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಆದರ್ಶ ನಮ್ಮ ಮುಂದಿದೆ. ಪಕ್ಷ ಸಂಘಟನೆಯ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.  ಹರಿಹರದ ಮಾಜಿ ಶಾಸಕ ಎಸ್. ರಾಮಪ್ಪ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ವಂಚಿತನಾದೆ. ಅಲ್ಲಿ ಪಕ್ಷ ಸೋಲು ಕಂಡಿತು ಎಂದು ಬೇಸರ ತೋಡಿಕೊಂಡರು. ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಎಲ್ಲರೂ ಸೇರಿ ಪ್ರಯತ್ನಿಸೊಣ ಎಂದರು.  ಮೇಯರ್ ಕೆ. ಚಮನ್ ಸಾಬ್, ಪಾಲಿಕೆ ಸದಸ್ಯರಾದ ಮೀನಾಕ್ಷಿ ಜಗದೀಶ್, ಸವಿತಾ ಹುಲ್ಮನಿ, ಸುಧಾ ಇಟ್ಟಿಗುಡಿ, ಆಶಾ ಉಮೇಶ್, ಬ್ಲಾಕ್ ಅಧ್ಯಕ್ಷರಾದ ಪುಷ್ಪಾ, ಮಂಜಮ್ಮ, ಶುಭಮಂಗಳಾ ಇದ್ದರು.  …  (ಕೋಟ್)  ಜಿಲ್ಲೆಯಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಎಲ್ಲ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಾರೆ. ಮಹಾನಗರ ಪಾಲಿಕೆಯ ಹಿಂದಿನ ಅವಧಿಯಲ್ಲಿ 4 ಜನ ಮಹಿಳೆಯರಿಗೆ ಮೇಯರ್ ಆಗುವ ಅವಕಾಶವನ್ನು ಪಕ್ಷ ಕಲ್ಪಿಸಿತು. ಈ ಅವಧಿಯಲ್ಲೂ ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿದೆ.   ದಿನೇಶ್ ಕೆ. ಶೆಟ್ಟಿ, ದೂಡಾ ಅಧ್ಯಕ್ಷ

blank
Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…