ಹಲ್ಲೆ ನಡೆಸಿ ಸಾವಿಗೆ ಕಾರಣವಾದ ಅಪರಾಧಿಗೆ ಶಿಕ್ಷೆ  

blank

ದಾವಣಗೆರೆ :  ಹಣಕಾಸಿನ ವಿಷಯದಲ್ಲಿ ಜಗಳವಾಡಿ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಆತನ ಸಾವಿಗೆ ಕಾರಣವಾದ ಅಪರಾಧಿಗೆ 2 ವರ್ಷ, 6 ತಿಂಗಳು ಕಾರಾಗೃಹ ಶಿಕ್ಷೆ ವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.  ವಿನೋದ ಅಲಿಯಾಸ್ ವಿನೋದ್ ರಾಜ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಪ್ರಕರಣದ ಇನ್ನೊಬ್ಬ ಅಪರಾಧಿ ರಾಕಿ ಅಲಿಯಾಸ್ ರಾಕೇಶ್ ವಿಚಾರಣಾ ಹಂತದಲ್ಲಿ ಮೃತಪಟ್ಟಿದ್ದ.  2022ರ ಜ. 25 ರಂದು ವಿನೋದ್ ಹಾಗೂ ರಾಕಿ, ಇಲ್ಲಿನ ಶಿವಾಜಿ ನಗರದ ಮನೆಗೆ ನುಗ್ಗಿ ಸ್ನೇಹಿತ ಪುನೀತ್ ಅವರ ಮೇಲೆ ಹಲ್ಲೆ ನಡೆಸಿದ್ದರಿಂದ ಗಾಯಗೊಂಡು ಪುನೀತ್ ಆಸ್ಪತ್ರೆಗೆ ದಾಖಲಾಗಿದ್ದರು.  ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಈ ಕುರಿತು ಗಾಂಧಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ವಿಚಾರಣೆ ನಡೆಸಿದ ನ್ಯಾಯಾಧೀಶ ಆರ್.ಎನ್. ಪ್ರವೀಣ್ ಕುಮಾರ್ ಸೋಮವಾರ ತೀರ್ಪು ನೀಡಿದರು. ಫಿರ್ಯಾದಿಯ ಪರವಾಗಿ ಸರ್ಕಾರಿ ವಕೀಲ ಕೆ.ಜಿ. ಜಯ್ಯಪ್ಪ ನ್ಯಾಯ ಮಂಡಿಸಿದ್ದರು.    

Share This Article

ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips

Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…

ರಾತ್ರಿ ನಿದ್ದೆ ಬರುತ್ತಿಲ್ಲವೇ? ಹೀಗೆ ಮಾಡಿದರೆ ಸ್ವಲ್ಪ ಹೊತ್ತಿನಲ್ಲೇ ನಿದ್ದೆ ಬರುತ್ತದೆ.. sleep

sleep : ಮಕ್ಕಳು ಮತ್ತು ವಯಸ್ಕರು ರಾತ್ರಿಯ ನಿದ್ರೆಯಲ್ಲಿ ತೊಂದರೆ ಅನುಭವಿಸುವುದು ಸಾಮಾನ್ಯ.  ಹೀಗಾಗಿ ಆರೋಗ್ಯಕರ…