More

    ಕಳ್ಳತನ ನಡೆದ 12 ಗಂಟೆಯೊಳಗೆ ಆರೋಪಿ ಬಂಧನ

    ದಾವಣಗೆರೆ : ಹಣಕಾಸು ಸಂಸ್ಥೆಯೊಂದರಲ್ಲಿ ಕಳ್ಳತನ ಮಾಡಿದ ಆರೋಪಿಯನ್ನು ಪ್ರಕರಣ ವರದಿಯಾದ 12 ಗಂಟೆಯೊಳಗೆ ಬಂಧಿಸಿ 10.88 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
     ಅದೇ ಕಚೇರಿಯ ಮಾಜಿ ನೌಕರ ಕೆ.ಬಿ. ಕಿರಣ ಕುಮಾರ ಬಂಧಿತ ಆರೋಪಿ. ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿರುವ ಗ್ರಾಮೀಣ ಕೂಟ ಸ್ಮಾಲ್ ಪೈನಾನ್ಸ್ ಕಚೇರಿಯಲ್ಲಿ ಹಣವನ್ನು ಸೇಫ್ ಲಾಕರ್‌ನಲ್ಲಿ ಇಡಲಾಗಿತ್ತು. ಮಂಗಳವಾರ ಬ್ಯಾಂಕ್‌ಗೆ ಜಮಾ ಮಾಡಲು ಸೇಫ್ ಲಾಕರ್ ನೋಡಿಕೊಂಡಾಗ ಹಣ ಕಳ್ಳತನವಾಗಿರುವುದು ಕಂಡುಬಂದಿದೆ. ಈ ಬಗ್ಗೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
     ಆರೋಪಿತರ ಪತ್ತೆ ಮಾಡಲು ಹೆಚ್ಚುವರಿ ಎಸ್ಪಿ ವಿಜಯಕುಮಾರ ಎನ್. ಸಂತೋಷ ಮತ್ತು ಜಿ. ಮಂಜುನಾಥ ನಿರ್ದೇಶನದಂತೆ, ನಗರ ಉಪ ವಿಭಾಗದ ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ ಮಾರ್ಗದರ್ಶನಲ್ಲಿ ಪೊಲೀಸ್ ನಿರೀಕ್ಷಕರಾದ ಶಶಿಧರ ಯು ಜೆ, ಪಿಎಸ್‌ಐ ಸಾಗರ್ ಅತ್ತರವಾಲ, ಮಂಜುಳಾ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿತು.
     ಕೆಟಿಜೆ ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ಪ್ರಕಾಶ ಟಿ, ಶಂಕರ ಆರ್ ಜಾಧವ್, ತಿಮ್ಮಣ್ಣ ಎನ್ ಆರ್, ಮಂಜಪ್ಪ ಎಂ, ಷಣ್ಮುಖ.ಕೆ, ಶಿವರಾಜ ಎಂ.ಎಸ್., ರವಿ ಲಂಬಾಣಿ, ರಾಘವೇಂದ್ರ, ಶಾಂತರಾಜ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
     …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts