More

    ರೋಡ್ ಶೋ, ಮುಖಂಡರ ಜತೆಗೆ ಚರ್ಚೆ

    ದಾವಣಗೆರೆ : ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದ್ದ ಸೋಮವಾರ ಕೆಲವು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಬ್ಬರದ ಪ್ರಚಾರ ಕೈಗೊಂಡರೆ ಮತ್ತೆ ಕೆಲವರು ಮುಖಂಡರ ಜತೆಗೆ ಚರ್ಚೆ, ಸಮಾಲೋಚನೆಯಲ್ಲಿ ತೊಡಗಿದ್ದರು.
     ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡುವ ಜತೆಗೆ ಮತದಾರರಿಗೆ ಕೈಮುಗಿದು ಮತ ಯಾಚನೆ ಮಾಡಿದರು. ಅಭ್ಯರ್ಥಿಗಳಿಗೆ ಅವರ ಬೆಂಬಲಿಗರು ಸಾಥ್ ನೀಡಿದರು.
     ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಶಾಮನೂರು ಶಿವಶಂಕರಪ್ಪ ಮತ್ತು ಉತ್ತರ ಕ್ಷೇತ್ರದ ಎಸ್.ಎಸ್. ಮಲ್ಲಿಕಾರ್ಜುನ್ ನಗರ ದೇವತೆ ದುರ್ಗಾಂಬಿಕಾ ದೇವಿಗೆ ಪೂಜೆ ಸಲ್ಲಿಸಿ ರೋಡ್ ಶೋ ಆರಂಭಿಸಿದರು.
     ದುರ್ಗಾಂಬಿಕಾ ವೃತ್ತದಿಂದ ಶುರುವಾದ ಮೆರವಣಿಗೆ ಹಗೆದಿಬ್ಬ ಸರ್ಕಲ್, ಗಾಂಧಿನಗರ, ಆಜಾದ್ ನಗರ, ಬಾಷಾನಗರ, ಚೌಕಿಪೇಟೆ, ಹೊಂಡದ ಸರ್ಕಲ್, ಕಾಯಿಪೇಟೆ ಮೂಲಕ ತೆರಳಿ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಅಂತ್ಯಗೊಂಡಿತು.
     ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಜಿ. ಅಜಯಕುಮಾರ್ ಹದಡಿ, ಮುದಹದಡಿ, ಜರಿಕಟ್ಟೆ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಮತ ಯಾಚನೆ ಮಾಡಿದರು. ಅಲ್ಲಲ್ಲಿ ಮುಖಂಡರ ಜತೆಗೆ ಚರ್ಚೆ ನಡೆಸಿದರು.
     ದಾವಣಗೆರೆ ಉತ್ತರದಲ್ಲಿ ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್, ನಿಟ್ಟುವಳ್ಳಿ ಮಣಿಕಂಠ ಸರ್ಕಲ್ ಭಾಗದಲ್ಲಿ, ಮಧ್ಯಾಹ್ನ ಇನ್ನೆರಡು ವಾರ್ಡುಗಳಲ್ಲಿ ಪ್ರಚಾರ ನಡೆಸಿದರು. ಸಂಜೆ ದುರ್ಗಾಂಬಿಕಾ ಮತ್ತು ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಹಿರಂಗ ಪ್ರಚಾರ ಅಂತ್ಯಗೊಳಿಸಲಾಯಿತು. ಕಿರುತೆರೆ ನಟಿಯರಾದ ರಜನಿ ಮತ್ತು ರಂಜನಿ ರಾಘವನ್ ಪ್ರಚಾರದಲ್ಲಿ ಸಾಥ್ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts