More

    ಬಾಪೂಜಿ ಆರೋಗ್ಯ ಕಾರ್ಡ್ ಯೋಜನೆಗೆ ಚಾಲನೆ

    ದಾವಣಗೆರೆ : ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಜನ್ಮದಿನದ ಪ್ರಯುಕ್ತ ನಗರದ ಬಾಪೂಜಿ ಸಮೂಹ ಆಸ್ಪತ್ರೆಗಳಲ್ಲಿ ಜನ ಸಾಮಾನ್ಯರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಕೈಗೆಟುಕುವ ರಿಯಾಯಿತಿ ದರದಲ್ಲಿ ನೀಡುವ ಉದ್ದೇಶದ ಬಾಪೂಜಿ ಆರೋಗ್ಯ ಕಾರ್ಡ್ ಯೋಜನೆಗೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಶುಕ್ರವಾರ ಚಾಲನೆ ನೀಡಿದರು.
     ‘ರಾಜ್ಯದಾದ್ಯಂತ ನಮ್ಮ ನಡೆ ಸದೃಢ ಆರೋಗ್ಯದೆಡೆ’ ಎಂಬ ಘೋಷವಾಕ್ಯದ ಆರೋಗ್ಯ ಕಾರ್ಡ್‌ಗಳನ್ನು ಸಚಿವ ಮಲ್ಲಿಕಾರ್ಜುನ್ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ವಿತರಿಸಿದರು.
     ನಂತರ ಮಾತನಾಡಿದ ಅವರು, ಬಾಪೂಜಿ ಸಮೂಹ ಆಸ್ಪತ್ರೆಗಳಾದ ಬಾಪೂಜಿ ಆಸ್ಪತ್ರೆ, ಎಸ್.ಎಸ್ ಹೈಟೆಕ್ ಆಸ್ಪತ್ರೆ, ಬಾಪೂಜಿ ಮಕ್ಕಳ ಆಸ್ಪತ್ರೆ, ಬಾಪೂಜಿ ಕಣ್ಣಿನ ಆಸ್ಪತ್ರೆ, ಎಸ್.ಎಸ್. ಸ್ಪರ್ಶ ಹಾಗೂ ಎಸ್.ಎಸ್.ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಈ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.
     ಜನ ಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಬಾಪೂಜಿ ಸಮೂಹ ಆಸ್ಪತ್ರೆಗಳಲ್ಲಿ ಎಲ್ಲ ಚಿಕಿತ್ಸೆಗಳಿಗೆ ರಿಯಾಯಿತಿ ನೀಡಬೇಕೆಂಬ ಸಚಿವ ಮಲ್ಲಿಕಾರ್ಜುನ್ ಆಶಯದಂತೆ ಈ ಕೊಡುಗೆ ನೀಡಲಾಗಿದೆ ಎಂದರು.
     ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಎಸ್.ಎಸ್. ಕೇರ್ ಟ್ರಸ್ಟ್‌ನ ಲೈಫ್ ಟ್ರಸ್ಟಿ ಡಾ.ಪ್ರಭಾ ಮಲ್ಲಿಕಾರ್ಜುನ್, ಜೆಜೆಎಂ ಮೆಡಿಕಲ್ ಕಾಲೇಜಿನ ಪ್ರಾಚಾರ್ಯೆ ಡಾ.ಶುಕ್ಲಾ ಶೆಟ್ಟಿ, ಎಸ್.ಎಸ್.ಐ.ಎಂ.ಎಸ್. ಪ್ರಾಚಾರ್ಯ ಡಾ.ಬಿ.ಎಸ್.ಪ್ರಸಾದ್, ನಿರ್ದೇಶಕ ಡಾ. ಅರುಣ ಕುಮಾರ್ ಅಜ್ಜಪ್ಪ, ಬಾಪೂಜಿ ಮಕ್ಕಳ ಆಸ್ಪತ್ರೆ ಎಚ್.ಒ.ಡಿ. ಡಾ.ಮೂಗನಗೌಡ, ಬಾಪೂಜಿ ಆಸ್ಪತ್ರೆಯ ನಿರ್ದೇಶಕ ಡಾ.ಡಿ.ಕೆ.ಕುಮಾರ್, ಡಾ.ಧನ್ಯಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts