ಫೆ. 9ರಂದು ಭಾನುವಳ್ಳಿಯಲ್ಲಿ ಉದ್ಯೋಗ ಮೇಳ

blank

ದಾವಣಗೆರೆ : ಭೀಮ ಸಮುದ್ರದ ಜಿ. ಮಲ್ಲಿಕಾರ್ಜುನಪ್ಪ ಮತ್ತು ಹಾಲಮ್ಮ ಚಾರಿಟಿ ಫೌಂಡೇಶನ್ ಹಾಗೂ ಭಾನುವಳ್ಳಿ ಸ್ನೇಹ ಸಂಭ್ರಮ ಗೆಳೆಯರ ಬಳಗದ ವತಿಯಿಂದ ಫೆ. 9ರಂದು ಉದ್ಯೋಗ ಮೇಳವನ್ನು ಹರಿಹರ ತಾಲೂಕು ಭಾನುವಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಗೌರವಾಧ್ಯಕ್ಷ ಟಿ.ಆರ್. ತೇಜಸ್ವಿ ಕಟ್ಟಿಮನಿ ಹೇಳಿದರು.  ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಇಂತಹ ಉದ್ಯೋಗ ಮೇಳ ನಡೆಸಲಾಗುತ್ತಿದೆ. 26 ಕಂಪನಿಗಳು ಪಾಲ್ಗೊಳ್ಳಲಿದ್ದು, 3,585 ಉದ್ಯೋಗಾವಕಾಶಗಳಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಪದವೀಧರರು ಮೇಳದಲ್ಲಿ ಭಾಗವಹಿಸಬಹುದು ಎಂದು ತಿಳಿಸಿದರು.  ಮೇಳವನ್ನು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟಿಸಲಿದ್ದಾರೆ. ಹರಿಹರ ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ವೀರೇಶ್ ಹನಗವಾಡಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗೆ 9964461461 ಸಂಪರ್ಕಿಸಬಹುದು ಎಂದು ಮನವಿ ಮಾಡಿದರು.  ಭಾನುವಳ್ಳಿಯ ಸ್ನೇಹ ಸಂಭ್ರಮ ಗೆಳೆಯರ ಬಳಗದ ಅಧ್ಯಕ್ಷ ಎಚ್.ಎಂ. ಶಿವಕುಮಾರ್, ಉಪಾಧ್ಯಕ್ಷ ಇ. ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಡಿ.ಬಿ. ರಾಮನಗೌಡ, ಸಂಘಟನಾ ಕಾರ್ಯದರ್ಶಿ ಆರ್.ಬಿ. ಫಕೀರಪ್ಪ, ನಿರ್ದೇಶಕರಾದ ಸರಳಾ, ರೂಪಾ, ಮಂಜುಳಾ ಇದ್ದರು.    

blank
Share This Article

ಸಣ್ಣ ವಿಷಯಗಳಿಗೂ ಒತ್ತಡಕ್ಕೆ ಒಳಗಾಗುತ್ತಿದ್ದೀರಾ?; ಹಾಗಾದ್ರೆ ತಪ್ಪಿದ್ದಲ್ಲ ಈ ಕಾಯಿಲೆಗಳ ಸಮಸ್ಯೆ | Health Tips

ಕೆಲವೊಮ್ಮೆ ನಮ್ಮ ಕೆಲವು ಅಭ್ಯಾಸಗಳು ನಮ್ಮ ದೇಹದಲ್ಲಿ ಹೇಗೆ ಗಂಭೀರ ಸಮಸ್ಯೆಗಳನ್ನು ಉಂಟುಮಾಡುತ್ತವೆ ಎಂಬುದನ್ನು ಅರ್ಥಮಾಡಿಕೊಳ್ಳುವುದಿಲ್ಲ.…

ಗರ್ಭಧಾರಣೆಯ 7ನೇ ತಿಂಗಳಿನಿಂದ ಅರಿಶಿನದೊಂದಿಗೆ ಹಸುವಿನ ಹಾಲು ಸೇವಿಸಿದ್ರೆ ಸಾಮಾನ್ಯ ಹೆರಿಗೆ ಆಗುವುದೇ; ತಜ್ಞರು ಹೇಳುವುದೇನು? | Health Tips

ಗರ್ಭಾವಸ್ಥೆಯಲ್ಲಿ ಪ್ರತಿ ಮಹಿಳೆ ತನ್ನ ಹೆರಿಗೆ ಸಾಮಾನ್ಯವಾಗಿರಬೇಕೆಂದು ಬಯಸುತ್ತಾರೆ. ವಾಸ್ತವವಾಗಿ ಸಿ-ಸೆಕ್ಷನ್ ಅನೇಕ ಅಡ್ಡಪರಿಣಾಮಗಳನ್ನು ಹೊಂದಿದೆ…

ಬೆಳಗ್ಗೆ ಎದ್ದ ತಕ್ಷಣ ಮಾಡುವ ಸಣ್ಣ ತಪ್ಪಿಂದಾಗಿ ಗಂಭೀರ ಕಾಯಿಲೆಗಳು ಎದುರಿಸಬೇಕಾಗುತ್ತಂತೆ!; ಅದು ಏನು ಗೊತ್ತೆ? | Morning

Morning : ನೀವು ಬೆಳ್ಳಿಗ್ಗೆ ಮತ್ತುಮ ರಾತ್ರಿ ಹಲ್ಲುಜ್ಜದೆ ಮಲಗಿದ್ರೆ ಏನೆಲ್ಲಾ ಆರೋಗ್ಯ ಸಮಸ್ಯೆಗಳು ಎದುರಾಗಿತ್ತವೆ…