More

    ಬನ್ನಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳೋಣ

    ದಾವಣಗೆರೆ : ಪ್ರಜಾಪ್ರಭುತ್ವದ ಮಹಾ ಹಬ್ಬ ಲೋಕಸಭಾ ಚುನಾವಣೆಯ ಮತದಾನದ ದಿನ ಬಂದೇ ಬಿಟ್ಟಿದೆ. ನಮ್ಮ ಕ್ಷೇತ್ರದ ಪ್ರತಿನಿಧಿಯನ್ನು ಚುನಾಯಿಸುವ ಮಹತ್ವದ ಸಂದರ್ಭ ಇದಾಗಿದೆ. ಮುಂದಿನ 5 ವರ್ಷಗಳ ಕಾಲ ಸಂಸದರಾಗಿ ನಮ್ಮ ಸಮಸ್ಯೆಗಳಿಗೆ ಸ್ಪಂದಿಸಬಲ್ಲ ವ್ಯಕ್ತಿಯನ್ನು ಆಯ್ಕೆ ಮಾಡಬೇಕಿದೆ. ಮತ ಚಲಾಯಿಸುವುದು ನಮ್ಮ ಹಕ್ಕು. ಅದು ವ್ಯರ್ಥವಾಗಲು ಬಿಡಬಾರದು.
     ಆದರೆ ಬಹಳಷ್ಟು ಜನರು ಮತಗಟ್ಟೆಗೆ ಹೋಗಿ ಮತ ಚಲಾಯಿಸುವುದಕ್ಕೆ ಆಸಕ್ತಿಯನ್ನೇ ತೋರುವುದಿಲ್ಲ. ಹೀಗಾಗಿ ಅನೇಕ ಮತಗಟ್ಟೆಗಳಲ್ಲಿ ಮತದಾನದ ಪ್ರಮಾಣ ಕಡಿಮೆಯಾದ ಉದಾಹರಣೆಗಳಿವೆ. ಇದನ್ನು ಮನಗಂಡು ಜಿಲ್ಲಾಡಳಿತದಿಂದ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ. ವಿಭಿನ್ನ ರೀತಿಯಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗಿದೆ. ಮತದಾನದ ಪ್ರಮಾಣ ಜಾಸ್ತಿಯಾಗಬೇಕು ಎನ್ನುವುದೆ ಇದರ ಆಶಯವಾಗಿದೆ.
     ಈ ಹಿನ್ನೆಲೆಯಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರ ಸಂದೇಶಗಳನ್ನು ಇಲ್ಲಿ ಕಟ್ಟಿಕೊಡಲಾಗಿದೆ. ಮಂಗಳವಾರ ನಡೆಯುವ ಮತದಾನದಲ್ಲಿ ಎಲ್ಲರೂ ಭಾಗವಹಿಸಿ ದೇಶ ಕಟ್ಟುವ ಕೆಲಸದಲ್ಲಿ ತೊಡಗಬೇಕು ಎಂದು ಅವರು ಮನವಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts