More

    ಮಾಯಕೊಂಡ ಬರಪೀಡಿತವೆಂದು ಘೋಷಿಸಲು ಮನವಿ

    ದಾವಣಗೆರೆ : ಮುಂಗಾರು ಮಳೆ ಅಭಾವದಿಂದ ಬೆಳೆಗಳು ಒಣಗಿ ಹೋಗಿದ್ದು ಮಾಯಕೊಂಡ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುವಂತೆ ಶಾಸಕ ಕೆ.ಎಸ್. ಬಸವಂತಪ್ಪ ಆಗ್ರಹಿಸಿದ್ದಾರೆ.
     ಅವರು ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಕುರಿತು ಮನವಿ ಸಲ್ಲಿಸಿದರು.
     ಈ ಬಾರಿ ಆರಂಭದಲ್ಲಿಯೇ ಮುಂಗಾರು ಮಳೆ ಕೈಕೊಟ್ಟಿತ್ತು. ನಂತರ ಸುರಿದ ಮಳೆಯಿಂದಾಗಿ ಮೆಕ್ಕೆಜೋಳ, ರಾಗಿ ಇನ್ನಿತರೆ ಬೀಜಗಳನ್ನು ಬಿತ್ತನೆ ಮಾಡಿದ್ದರು. ಆದರೆ ಮಳೆಯ ಕೊರತೆಯಿಂದ ಬೆಳೆಗಳು ಒಣಗಿವೆ. ಇದರಿಂದ ರೈತರು ತತ್ತರಿಸಿ ಹೋಗಿದ್ದಾರೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
     ಮಳೆ ಇಲ್ಲದೆ ಅಂತರ್ಜಲ ಮಟ್ಟ ಕುಸಿದ ಪರಿಣಾಮ ಅಡಕೆ ತೋಟಗಳು ಒಣಗುವಂತಾಗಿದೆ. ಹೀಗಾಗಿ ಮಾಯಕೊಂಡ ಕ್ಷೇತ್ರವನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು. ಮುಖಂಡರಾದ ಅಣಜಿ ಚಂದ್ರಣ್ಣ, ಹೆದ್ನೆ ರಾಜೇಂದ್ರ, ಲೋಕೇಶ್, ರುದ್ರನಕಟ್ಟೆ ಸ್ವಾಮಿ, ಶಂಭಣ್ಣ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts