ದಾವಣಗೆರೆ : ದಿನಪತ್ರಿಕೆಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ. ಅನೇಕ ಮಾಹಿತಿಗಳು ತಿಳಿಯುತ್ತವೆ. ‘ನಾರಿ ನಿನಗೊಂದು ಸ್ಯಾರಿ’ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ‘ವಿಜಯವಾಣಿ’ ಮಹಿಳೆಯರಿಗೆ ಓದಲು ಪ್ರೋತ್ಸಾಹ ನೀಡುತ್ತಿದೆ ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಹೇಳಿದರು. ಕನ್ನಡದ ನಂ. 1 ದಿನಪತ್ರಿಕೆ ವಿಜಯವಾಣಿಯಿಂದ ಆಯೋಜಿಸಿದ್ದ ‘ನಾರಿ ನಿನಗೊಂದು ಸ್ಯಾರಿ’ ಸ್ಪರ್ಧೆಯ ವಿಜೇತರನ್ನು ಆಯ್ಕೆ ಮಾಡಲು ಮಂಗಳವಾರ ಪತ್ರಿಕೆಯ ಕಚೇರಿಯಲ್ಲಿ ನಡೆದ ಲಕ್ಕಿ ಡಿಪ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದು ಮೊಬೈಲ್ ಫೋನ್ ಬಳಕೆ ಹೆಚ್ಚಾಗಿದ್ದು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸುವುದು ಜಾಸ್ತಿಯಾಗಿದೆ. ಇಂಥ ಸನ್ನಿವೇಶದಲ್ಲಿ ಪತ್ರಿಕೆಗಳನ್ನು ಓದುವ ಹವ್ಯಾಸ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ನಾನು ಕೆಎಎಸ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ದಿನಪತ್ರಿಕೆಗಳನ್ನು ಹೆಚ್ಚಾಗಿ ಓದುತ್ತಿದ್ದೆ. ಅದರಿಂದ ಬಹಳ ಅನುಕೂಲವಾಯಿತು. ಪತ್ರಿಕೆಗಳಲ್ಲಿ ಬರುವ ಮಾಹಿತಿಗಳಿಂದ ಸಮಕಾಲೀನ ವಿಷಯಗಳ ಬಗ್ಗೆ ನಮ್ಮ ತಿಳಿವಳಿಕೆ ಹೆಚ್ಚಾಗುತ್ತದೆ. ಆದ್ದರಿಂದ ವಾಚನಾಭಿರುಚಿ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪತ್ರಿಕೆಗಳಲ್ಲಿ ಬರುವ ಸುದ್ದಿಗಳನ್ನು ಓದಿದಾಗ ವಾಕ್ಯ ರಚನೆ ಹೇಗೆ ಮಾಡಬೇಕು ಎಂಬುದು ಅರಿವಿಗೆ ಬರುತ್ತದೆ. ಶಬ್ದಗಳ ಬಳಕೆಯ ಬಗ್ಗೆ ತಿಳಿಯುತ್ತದೆ. ಪತ್ರಿಕೆಗಳು ಪ್ರಜಾಪ್ರಭುತ್ವದ 4ನೇ ಅಂಗವಾಗಿದ್ದು ಅವುಗಳ ಮಹತ್ವವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದಾವಣಗೆರೆಯ ವಿಶೇಷ ವರದಿಗಾರ ರಮೇಶ ಜಹಗೀರದಾರ್ ಸ್ವಾಗತಿಸಿದರು. ಮುಖ್ಯ ಉಪ ಸಂಪಾದಕ ಹರ್ಷ ಪುರೋಹಿತ್, ಜಾಹೀರಾತು ವಿಭಾಗದ ಮುಖ್ಯಸ್ಥ ಕುಮಾರಸ್ವಾಮಿ ಲಕ್ಕಿ ಡಿಪ್ ನಿರ್ವಹಣೆ ಮಾಡಿದರು. ಸೀನಿಯರ್ ಆಫೀಸರ್ ಶಶಿಧರ ಮೂರ್ತಿ, ಹಿರಿಯ ವರದಿಗಾರ ಡಿ.ಎಂ. ಮಹೇಶ್, ಪ್ರಸಾರಾಂಗ ವಿಭಾಗದ ಶುಭಕರ್ ಇನ್ನಿತರ ಸಹೋದ್ಯೋಗಿಗಳು ಇದ್ದರು. …
ಮಹಿಳೆಯರಿಗೆ ಓದುವ ಅಭಿರುಚಿ ಅಗತ್ಯ

ಅನಾನಸ್ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips
Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…
ಬೇಸಿಗೆಯಲ್ಲಿ ಕೊತ್ತಂಬರಿ, ಪುದೀನ ಒಣಗುತ್ತಿದೆಯೇ? ತಾಜಾವಾಗಿಡಲು ಈ ರೀತಿ ಮಾಡಿ | Summer
Summer: ಜನರು ಬೇಸಿಗೆಯಲ್ಲಿ ತಮ್ಮ ದೇಹವನ್ನು ತಂಪಾಗಿಡಲು ಪುದೀನ ಎಲೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಪುದೀನ ಮತ್ತು…
ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್ನ ಶತ್ರುಗಳು! Cholesterol
Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ…