More

    ಅಭ್ಯರ್ಥಿಗಳು ರಿಲ್ಯಾಕ್ಸ್ ಮೂಡ್ ಗೆ

    ದಾವಣಗೆರೆ: ಕಳೆದ ಒಂದು ತಿಂಗಳಿಂದ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರದಲ್ಲಿ ಸುತ್ತಾಡಿ ಮತಯಾಚನೆ ಮಾಡಿದ್ದ ಅಭ್ಯರ್ಥಿಗಳು ಗುರುವಾರ ರಿಲ್ಯಾಕ್ಸ್ ಮೂಡ್‌ಗೆ ಜಾರಿದ್ದರು.
     ನಿರಂತರ ಓಡಾಟದಿಂದ ಸುಸ್ತಾಗಿದ್ದ ಕೆಲವರು ಕಣ್ತುಂಬ ನಿದ್ದೆ ಮಾಡಿದರು. ಧಾರ್ಮಿಕ ಪ್ರವಾಸಿ ತಾಣಗಳಿಗೆ ಭೇಟಿ, ಕಾರ್ಯಕರ್ತರು, ಮುಖಂಡರೊಂದಿಗೆ ಚರ್ಚೆ, ಮತದಾನದ ಪ್ರಮಾಣದ ಕುರಿತು ವಿಶ್ಲೇಷಣೆ, ಗೆಲ್ಲುವ ಸಾಧ್ಯತೆಗಳ ಕುರಿತು ಲೆಕ್ಕಾಚಾರ ಫಫಫ.
     ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಜಿ. ಅಜಯ್‌ಕುಮಾರ್ ಬೆಳಗ್ಗೆ 10 ಗಂಟೆಗೆ ಎದ್ದು ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು. ನಂತರ ಕಾರ್ಯಕರ್ತರನ್ನು ಭೇಟಿಯಾದರು.
     ದಾವಣಗೆರೆ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್, ಕಾರ್ಯಕರ್ತರು, ಮುಖಂಡರನ್ನು ಭೇಟಿಯಾಗಿ ಚರ್ಚಿಸಿದರು.
     ಹರಿಹರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಅವರ ದಿನಚರಿ ಎಂದಿನಂತೆ ಸಹಜವಾಗಿತ್ತು.
     ‘ಚುನಾವಣಾ ಪ್ರಚಾರವಿದ್ದಾಗ ಬೆಳಗ್ಗೆ 5.30ಕ್ಕೆ ಏಳುತ್ತಿದ್ದೆ, ಇಂದು 7.30ಕ್ಕೆ ಎದ್ದೆ. ಮದುವೆ ಸಮಾರಂಭಗಳಿಗೆ ಹೋಗಿಬಂದೆ. ಕಾರ್ಯಕರ್ತರು, ಜನರನ್ನು ಭೇಟಿಯಾದೆ’ ಎಂದು ಶಿವಶಂಕರ್ ತಿಳಿಸಿದರು.
     ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್. ಬಸವಂತಪ್ಪ ಅವರ ದಿನಚರಿಯಲ್ಲೂ ಯಾವುದೇ ಬದಲಾವಣೆ ಇರಲಿಲ್ಲ. ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಆಸ್ಪತ್ರೆಗೆ ದಾಖಲಾದವರ ಯೋಗಕ್ಷೇಮ ವಿಚಾರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts