More

    ಹೆಚ್ಚು ಅನುದಾನ ತಂದು ದಾವಣಗೆರೆ ಅಭಿವೃದ್ಧಿ

    ದಾವಣಗೆರೆ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿದರೆ ಹೆಚ್ಚು ಅನುದಾನ ತಂದು ದಾವಣಗೆರೆ ಅಭಿವೃದ್ಧಿ ಮಾಡಲಾಗುವುದು ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು.
     ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 10ನೇ ವಾರ್ಡ್‌ನ ನಾಗರಿಕರನ್ನು ಉದ್ದೇಶಿಸಿ ಗುರುವಾರ ಮಾತನಾಡಿ, ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ ಎಂಬುದನ್ನು ಸಾಬೀತುಪಡಿಸಿದ್ದೇವೆ. ನಮ್ಮ ಸರ್ಕಾರ ಭರವಸೆಯನ್ನು ಈಡೇರಿಸಿದ ತೃಪ್ತಿ ಹೊಂದಿದ್ದು, ಮತ್ತಷ್ಟು ಸ್ಫೂರ್ತಿಯಿಂದ ಕೆಲಸ ಮಾಡಲು ನಿಮ್ಮ ಬೆಂಬಲ ಅವಶ್ಯಕತೆಯಿದೆ ಎಂದರು.
     ಮಾಜಿ ಸಂಸದ ಕೆ.ಸಿ. ಕೊಂಡಯ್ಯ ಮಾತನಾಡಿ, ಪ್ರಭಾ ಮಲ್ಲಿಕಾರ್ಜುನ್ ಎಸ್.ಎಸ್. ಟ್ರಸ್ಟ್ ಮೂಲಕ ಸಾಮಾಜಿಕ ಸೇವೆ ಮಾಡುತ್ತ ಬಂದಿದ್ದು, ಅವರಿಗೆ ಜನರ ಸಂಕಷ್ಟ ಅರ್ಥ ಮಾಡಿಕೊಳ್ಳುವ ಗುಣವಿದೆ ಎಂದು ತಿಳಿಸಿದರು.
     ವಾರ್ಡ್‌ನ ಮುಖಂಡ ಸತೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಬಾಯಿ, ದೂಡಾ ಮಾಜಿ ಅಧ್ಯಕ್ಷ ಮಾಲತೇಶ್ ರಾವ್, ಮೇಯರ್ ವಿನಾಯಕ ಪೈಲ್ವಾನ್, ಮಹಾನಗರ ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್, ಮುಖಂಡ ಬಾಬುರಾವ್ ಸಾಳಂಕಿ, ಮಂಜಮ್ಮ, ಉಮೇಶ್ ರಾವ್ ಸಾಳಂಕಿ, ಗೌಡ್ರು ಚನ್ನಬಸಪ್ಪ, ಕ್ಯಾಪ್ಟನ್ ನಾಗರಾಜ್, ಗುರುರಾಜ್ ಮರಿಯಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts