More

    ಜಲಸಿರಿ ಯೋಜನೆ ಪೂರ್ಣಗೊಳಿಸಲು 2 ತಿಂಗಳ ಗಡುವು

    ದಾವಣಗೆರೆ: ಜಲಸಿರಿ ಯೋಜನೆಯ ಕಾಮಗಾರಿಯನ್ನು ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸಿ ನಗರಕ್ಕೆ ನೀರು ಒದಗಿಸಬೇಕು ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅಧಿಕಾರಿಗಳಿಗೆ ಗಡುವು ನೀಡಿದರು.
     ತಮ್ಮ ಗೃಹ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ಅವರು, ನೀರು ಒದಗಿಸದಿದ್ದರೆ ಶಿಸ್ತುಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
     ಜಲಸಿರಿ ಯೋಜನೆ ಕಾಮಗಾರಿಗೆ 6 ವರ್ಷಗಳ ಹಿಂದೆ ಚಾಲನೆ ನೀಡಲಾಗಿತ್ತು. 4 ವರ್ಷಗಳ ಅವಧಿಯಲ್ಲಿ ಕಾಮಗಾರಿ ಮುಕ್ತಾಯಗೊಳಿಸಿ ಸಾರ್ವಜನಿಕರಿಗೆ ನೀರು ಒದಗಿಸಬೇಕಾಗಿತ್ತು, ಆದರೆ ಹಾಗೆ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
     ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿಳಂಬ ನೀತಿಯಿಂದಾಗಿ ಕಾಮಗಾರಿ ಪೂರ್ಣಗೊಂಡಿಲ್ಲ. ನೀರು ಪೂರೈಕೆಯಾಗದೆ ಜನರು ಪರಿತಪಿಸುವಂತಾಗಿದೆ. ಸಾರ್ವಜನಿಕರು ನಮ್ಮ ಬಳಿ ಅಳಲನ್ನು ತೊಡಿಕೊಳ್ಳುತ್ತಿದ್ದು, ‘ನೀವು ನೀರು ಇಲ್ಲದೆ ಜೀವಿಸುತ್ತೀರಾ’ ಎಂದು ಪ್ರಶ್ನಿಸಿದರು.
     ಇದೇ ವೇಳೆ ಸ್ಮಾರ್ಟ್ ಸಿಟಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಮನೂರು, ಕಾಮಗಾರಿಗಳು ವಿಳಂಬ ಆಗದಂತೆ ಆದಷ್ಟು ಶೀಘ್ರ ಗುಣಮಟ್ಟದ ಕಾಮಗಾರಿ ಮಾಡುವಂತೆ ಸೂಚಿಸಿದರು.
     ಉದ್ಯಮಿ ಎಸ್.ಎಸ್.ಗಣೇಶ್, ಮಹಾನಗರ ಪಾಲಿಕೆ ಸದಸ್ಯರಾದ ಎ.ಬಿ. ರಹೀಂ, ಕಬೀರ್, ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ವೀರೇಶ್, ನಿರ್ದೇಶಕರಾದ ಎಂ.ನಾಗರಾಜ್, ಪ್ರಭಾರ ಮುಖ್ಯ ಇಂಜಿನಿಯರ್ ಹರ್ಷಿತಾ, ಜಲಸಿರಿ ಯೋಜನೆಯ ವೀರೇಂದ್ರ ಕುಂದಗೋಳ್, ಕಾರ‌್ಯಪಾಲಕ ಇಂಜಿನಿಯರ್ ಕಾಯಿ ಮಂಜುನಾಥ್, ಮುಖಂಡರಾದ ಕೊಡಪಾನ ದಾದಾಪೀರ್, ಲಾಲ್ ಆರೀಫ್, ಅಲಿ, ಸೈಯದ್ ಬಾಬ್ ಜಾನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts