ದಾವಣಗೆರೆ : ರಾಮ ರಾಮ ಎಂದು ನುಡಿದೀತಲೆ
ಮುತ್ತೈದೆಯರಿಗೆ ಮಹಾತಾಯಿ ಉಡಿ ತುಂಬಿಯಾಳಲೆ
ನರಲೋಕದ ಜನಕೆ ಆನೆ ಕಿರೀಟ ಇಟ್ಟೀತಲೆ
ಮಹಾತಾಯಿ ಬೇರುಸೊಪ್ಪು ಬೀಸಿತ್ತಲೆ ಎಚ್ಚರ.
ಶ್ರಾವಣ ಮಾಸದ ಕಡೇ ಸೋಮವಾರ ನಗರದ ಇತಿಹಾಸ ಪ್ರಸಿದ್ಧ ಆನೆಕೊಂಡದ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಕಾರ್ಣೀಕ ನುಡಿಯಿದು.
ಹೂಗಳಿಂದ ಅಲಂಕರಿಸಿದ ಪಲ್ಲಕ್ಕಿಯಲ್ಲಿ ಬಾತಿ ನೀಲಾನಹಳ್ಳಿಯ ಶ್ರೀ ಆಂಜನೇಯಸ್ವಾಮಿ, ಆನೆಕೊಂಡದ ಶ್ರೀ ಬಸವೇಶ್ವರಸ್ವಾಮಿ, ನಿಟುವಳ್ಳಿಯ ಶ್ರೀ ದುರ್ಗಾಂಬಿಕಾದೇವಿ ಮತ್ತಿತರ ದೇವಾಲಯಗಳ ದೇವರ ಉತ್ಸವಮೂರ್ತಿಗಳು ಆಗಮಿಸಿದ ಬಳಿಕ ಅಪಾರ ಭಕ್ತ ಸಮೂಹದ ನಡುವೆ ಕಾರ್ಣೀಕ ನಡೆಯಿತು.
ದೇವಸ್ಥಾನಕ್ಕೆ ಕುಟುಂಬ ಸಮೇತ ಆಗಮಿಸಿದ ಭಕ್ತರು ದೇವರಿಗೆ ಹಣ್ಣು-ಕಾಯಿ ಸಮರ್ಪಿಸಿ ಪೂಜೆ ಸಲ್ಲಿಸಿದರು. ಮಹೋತ್ಸವಕ್ಕೆ ಬಂದ ದೇವರಗಳಿಗೆ ಕೈ ಮುಗಿದು ಭಕ್ತಿಯಿಂದ ಪ್ರಾರ್ಥಿಸಿದರು. ಕುಟುಂಬದವರು ಮಕ್ಕಳೊಂದಿಗೆ ಜಾತ್ರೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು
ಜಾತ್ರೆ ಪ್ರಯುಕ್ತ ಬಂಬೂಬಜಾರ್ ರಸ್ತೆಯಲ್ಲಿ ಇರಿಸಲಾಗಿದ್ದ ಅಂಗಡಿಗಳಲ್ಲಿ ರ ಮಂಡಕ್ಕಿ, ಬೆಂಡು ಬತ್ತಾಸು, ಜಿಲೇಬಿ ಮೈಸೂರುಪಾಕ್ ಮೊದಲಾದ ತಿನಿಸುಗಳು ಹಾಗೂ ಬಳೆ, ಸರ, ಕಿವಿಯೋಲೆ ಮೊದಲಾದ ವಸ್ತುಗಳು, ಚಿಕ್ಕಮಕ್ಕಳ ಆಟಿಕೆಗಳ ಖರೀದಿಯೂ ಜೋರಾಗಿತ್ತು.
ಆನೆಕೊಂಡದ ಶ್ರೀ ಬಸವೇಶ್ವರಸ್ವಾಮಿ ಕಾರ್ಣೀಕ

ಹೋಟೆಲ್ ಸ್ಟೈಲ್ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe
ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್ಗೆ ಹೋಗಿ ಊಟ ಮಾಡಲು…
ಚಿನ್ನದ ಮೇಲೆ ಲೋನ್ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan
Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…
ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips
ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…