ಮನಸ್ಸು ಒಂದುಗೂಡಿಸುವುದು ಒಳ್ಳೆಯ ವಿಚಾರ  

blank

ದಾವಣಗೆರೆ :  ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ಯಾತ್ರೆ ಮಾಡುವುದಾಗಿ ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿರುವುದನ್ನು ಸ್ವಾಗತಿಸುವುದಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.  ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಒಡೆದ ಮನಸ್ಸುಗಳನ್ನು ಒಂದು ಮಾಡುವುದು ಒಳ್ಳೆಯ ವಿಚಾರವೇ ಆಗಿದೆ ಎಂದು ಪ್ರತಿಕ್ರಿಯಿಸಿದರು.  ನಾವು ಭ್ರಷ್ಟಾಚಾರ ಹಾಗೂ ಕುಟುಂಬ ರಾಜಕಾರಣದ ವಿರುದ್ಧವಾಗಿದ್ದೇವೆ. ದೆಹಲಿಯಲ್ಲಿ ಎಎಪಿ ಹೀನಾಯವಾಗಿ ಸೋಲಲು ಅವರ ಭ್ರಷ್ಟಾಚಾರವೇ ಕಾರಣವಾಗಿದೆ. ಆದ್ದರಿಂದ ರಾಜ್ಯದಲ್ಲಿ ಭ್ರಷ್ಟಾಚಾರಮುಕ್ತ ವ್ಯವಸ್ಥೆ ಬರಬೇಕಿದೆ ಎಂದು ತಿಳಿಸಿದರು.  ಮಾಧ್ಯಮಗಳಲ್ಲಿ ವಿಜಯೇಂದ್ರ ಪರವಾಗಿ, ನಮ್ಮ ವಿರುದ್ಧವಾಗಿ ವರದಿಗಳು ಬರುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ದೆಹಲಿಯಲ್ಲಿ ರಾಷ್ಟ್ರೀಯ ನಾಯಕರು ಸಿಗುತ್ತಾರೋ ಇಲ್ಲವೋ ಎನ್ನುವುದನ್ನು ನಿಮಗೇಕೆ ಹೇಳಲಿ?. ನಾವು ದೆಹಲಿಗೆ ಹೋಗುತ್ತೇವೆ, ನಮ್ಮ ಪ್ರಯತ್ನ ಮಾಡುತ್ತೇವೆ. ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮುಖ್ಯಮಂತ್ರಿಯಾಗಲು ನಾನೂ ಅರ್ಹನಿದ್ದೇನೆ ಎಂದು ಹೇಳಿದರು.  ದಾವಣಗೆರೆಯಲ್ಲಿ ಎರಡು ಹಂದಿಗಳಿವೆ. ಹಾದಿ ಬೀದಿಯಲ್ಲಿ ಮಾತನಾಡುವ ಅವರಿಗೆ ನಾನೇಕೆ ಉತ್ತರ ನೀಡಲಿ ಎಂದು ಬಿ.ವೈ. ವಿಜಯೇಂದ್ರ ಬಣದ ಇಬ್ಬರು ಮುಖಂಡರ ವಿರುದ್ಧ ಅವರ ಹೆಸರು ಹೇಳದೇ ಹರಿಹಾಯ್ದರು.    

blank
Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…