More

    ಆಪ್ ರಾಜ್ಯ ಸಮಾವೇಶಕ್ಕೆ ದಾವಣಗೆರೆ ಸಜ್ಜು

    ದಾವಣಗೆರೆ : ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಮಾವೇಶ ನಗರದ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ನಡೆಯಲಿದ್ದು 50 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
     ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆಪ್ ಇಷ್ಟು ದೊಡ್ಡಮಟ್ಟದ ಸಮಾವೇಶವನ್ನು ಸಂಘಟಿಸುತ್ತಿದ್ದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಲ್ಲಿಂದಲೇ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಅವರಿಗೆ ಪಂಜಾಬ್ ಸಿಎಂ ಭಗವಂತ್ ಮಾನ್ ಸಾಥ್ ನೀಡಲಿದ್ದಾರೆ.
     ಪಕ್ಷದ ರಾಜ್ಯ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ರಾಜ್ಯ ನಾಯಕರು, ಟಿಕೆಟ್ ಆಕಾಂಕ್ಷಿಗಳು ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ ಕಾರ್ಯಕರ್ತರಿಗೆ ಪ್ರಮಾಣವಚನ ಬೋಧಿಸಲಾಗುವುದು.
     ಸಿದ್ಧತೆಗಳು ಪೂರ್ಣಗೊಂಡಿದ್ದು 25 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವೇದಿಕೆ 50 ಅಡಿ ಉದ್ದ, 50 ಅಡಿ ಅಗಲವಿದ್ದು ಮುಂಭಾಗದಲ್ಲಿ 500 ಅಡಿ ಉದ್ದ, 350 ಅಡಿ ಅಗಲದ ಪೆಂಡಾಲ್ ಹಾಕಲಾಗಿದೆ.
     ಸಮಾವೇಶಕ್ಕೆ ಬರುವವರಿಗೆ 30 ಊಟದ ಕೌಂಟರ್, ಕುಡಿಯುವ ನೀರಿನ ವ್ಯವಸ್ಥೆಯಾಗುತ್ತಿದೆ. ಅರವಿಂದ ಕೇಜ್ರಿವಾಲ್, ಭಗವಂತ ಮಾನ್ ಅವರ ಭಾವಚಿತ್ರಗಳಿರುವ ಫ್ಲೆಕ್ಸ್‌ಗಳನ್ನು ನಗರದ ವಿವಿಧೆಡೆ ಹಾಕಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts