ಪುಟ್ಟರಾಜ ಗವಾಯಿಗಳು ಅಂಧರ ಬದುಕಿನ ಊರುಗೋಲು

blank

ದಾವಣಗೆರೆ : ಅಸಂಖ್ಯ ಅಂಧರಿಗೆ ಸಂಗೀತ ವಿದ್ಯೆ ಧಾರೆಯೆರೆದು ಅವರ ಬದುಕಿಗೆ ಊರುಗೋಲಾಗಿದ್ದ ಡಾ. ಪಂ. ಪುಟ್ಟರಾಜ ಗವಾಯಿಗಳು ಸಮಗ್ರ ಕರ್ನಾಟಕದ ಮಹಾಪುರುಷ ಎಂದು ಜಾನಪದ ವಿದ್ವಾಂಸ, ಹಿರಿಯ ಸಾಹಿತಿ ಡಾ.ಎಂ.ಜಿ. ಈಶ್ವರಪ್ಪ ಬಣ್ಣಿಸಿದರು.
ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯಿಂದ ನಗರದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ, ರಾಜ್ಯ ಮಟ್ಟದ 5ನೇ ಭಕ್ತಿ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದರು.
ಕಣ್ಣಿಲ್ಲದವರಿಗೆ ದೊಡ್ಡ ಮಾರ್ಗವನ್ನು ಹಾಕಿಕೊಟ್ಟು ಪರಂಪರೆಯನ್ನು ಹುಟ್ಟುಹಾಕಿದರು. ಬ್ರೈಲ್ ಲಿಪಿಯಲ್ಲಿ ಸಂಗೀತ ಮತ್ತು ಸಾಹಿತ್ಯದ ಕೃತಿಗಳನ್ನು ರಚಿಸಿದರು. ಅಂಧರನ್ನು ರಂಗಭೂಮಿಗೆ ಪರಿಚಯಿಸಿದರು ಎಂದು ತಿಳಿಸಿದರು.
ಹಿಂದುಸ್ತಾನಿ ಸಂಗೀತವು ರಾಜ್ಯದಲ್ಲಿ ಜಗಜಗಿಸುವಂತೆ ಮಾಡಿದವರು ಪುಟ್ಟರಾಜ ಗವಾಯಿಗಳು. ಇದೇ ಕಾರಣಕ್ಕೆ ದೇಶಾದ್ಯಂತ ಅವರಿಗೆ ಅಪಾರ ಗೌರವವಿದೆ ಎಂದು ಹೇಳಿದರು.
ಪುಟ್ಟರಾಜ ಗವಾಯಿಗಳು ಅಂಧರಾಗಿದ್ದರೂ ಕನ್ನಡ, ಹಿಂದಿ, ಸಂಸ್ಕೃತ ಭಾಷೆಗಳಲ್ಲಿ ವಿದ್ವಾಂಸರಾಗಿ, ಪುರಾಣ, ಪ್ರವಚನಗಳ ಮೂಲಕ ಜ್ಞಾನ ಪ್ರಸಾರ ಮಾಡಿದರು. ಅವರು ‘ಕಲ್ಯಾಣ ಕರ್ನಾಟಕದ ಕಲ್ಯಾಣ ಪುರುಷ’ ಎಂದರು.
ಪಾಂಡೋಮಟ್ಟಿ ವಿರಕ್ತ ಮಠದ ಡಾ.ಶ್ರೀ ಗುರುಬಸವ ಸ್ವಾಮೀಜಿ ಮಾತನಾಡಿ, ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳು ತ್ರಿವಿಧ ದಾಸೋಹದ ಮೂಲಕ ಬಹಿರಂಗ ಸೇವೆ ಮಾಡಿದರೆ, ಗವಾಯಿಗಳದು ಅಂತರ್ಮುಖಿ ಸೇವೆಯಾಗಿತ್ತು. ಮನುಷ್ಯ ಸಾಹಿತ್ಯ, ಸಂಗೀತ, ಕಲೆ ಇವುಗಳಲ್ಲಿ ಒಂದನ್ನಾದರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮೌಢ್ಯ ಭಕ್ತಿ ಇರಬಾರದು ಎಂದು ಹೇಳಿದರು.

blank
Share This Article

ಒಣಗಿದ ಮಾವು, ಪೇರಲ ಮತ್ತು ಹಲಸಿನ ಎಲೆಗಳಿಗೆ ಹೆಚ್ಚಿದ ಬೇಡಿಕೆ! ಒಂದು ಪ್ಯಾಕೆಟ್ ಬೆಲೆ 500 ರೂ. dried mango leaves

dried mango leaves : ಹಿಂದೂ ಧರ್ಮದಲ್ಲಿ ಮಾವಿನ ಎಲೆಗಳಿಗೆ ವಿಶೇಷ ಸ್ಥಾನವಿದೆ. ಶುಭ ಸಮಾರಂಭಗಳು…

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…