ದಿ.ವಿಷ್ಣು ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಲು ಆಗ್ರಹ

blank

ದಾವಣಗೆರೆ: ನಟ ದಿ.ಡಾ.ವಿಷ್ಣುವರ್ಧನ್ ಅವರಿಗೆ ಕೇಂದ್ರ ಸರ್ಕಾರ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಬೇಕೆಂದು ಡಾ. ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ವಿ. ತಿರುಮಲೇಶ್ ಆಗ್ರಹಿಸಿದರು.
ಇಲ್ಲಿನ ಭಗತ್‌ಸಿಂಗ್ ಆಟೋ ನಿಲ್ದಾಣ ಆವರಣದಲ್ಲಿ , ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 15ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಉಭಯ ಸರ್ಕಾರಗಳು ವಿಷ್ಣು ಅವರಿಗೆ ಯಾವುದೇ ಪ್ರಶಸ್ತಿ ನೀಡಿಲ್ಲ. ಇನ್ನಾದರೂ ಗಮನ ಹರಿಸಬೇಕು ಎಂದರು.
ಬೆಂಗಳೂರಿನಲ್ಲಿ ಡಾ.ವಿಷ್ಣು ಸ್ಮಾರಕ ನಿರ್ಮಾಣ ಇರುವರೆಗೆ ನನೆಗುದಿಯಲ್ಲಿದೆ. ಮುಖ್ಯಮಂತ್ರಿ ಸಿದ್ದ್ಧರಾಮಯ್ಯ ಇತ್ತ ಗಮನಹರಿಸಿ ಸ್ಮಾರಕ ನಿರ್ಮಾಣಕ್ಕೆ ಆಸಕ್ತಿ ವಹಿಸಬೇಕೆಂದು ಮನವಿ ಮಾಡಿದರು.
ಅಡ್ಡಿ-ಆತಂಕದ ಬಗ್ಗೆ ಮೇರು ನಟರಾಗಿ ಬೆಳೆದು, ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿದ್ದ ಕೀರ್ತಿ ಸಾಹಸಸಿಂಹ ಡಾ. ವಿಷ್ಣುವರ್ಧನ್‌ರವರಿಗೆ ಸಲ್ಲುತ್ತದೆ. ಅವರು ಕೇವಲ ಕಲಾವಿದರಾಗಿರದೆ, ಸಮಾಜದ ಒಳಿತಿಗಾಗಿ ಶ್ರಮಿಸಿದ್ದರು ಎಂದು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಸದಸ್ಯ ಎನ್.ಜೆ. ನಿಂಗಣ್ಣ, ಪತ್ರಕರ್ತ ಎಸ್. ಹನುಮಂತಪ್ಪ ಹಾಲಿವಾಣ, ವಿನಾಯಕ ಪಗಡೆ, ಬಿಜೆಪಿ ಮುಖಂಡ ಲಕ್ಷ್ಮಣ್, ಆವರಗೆರೆ ಶೇಖರಪ್ಪ, ಮಲ್ಲಯ್ಯ ಹಿರೇಮಠ್, ಶಿವಕುಮಾರ್, ಆಟೋ ಚಾಲಕರು, ಅಭಿಮಾನಿಗಳಿದ್ದರು.
—-

blank
Share This Article

ನಿಮ್ಮ ಕನಸಿನಲ್ಲಿ ಗಿಳಿ, ಗೂಬೆ, ನವಿಲು ಕಾಣಿಸಿಕೊಂಡಿದ್ಯಾ? ಈ ಪಕ್ಷಿಗಳಿಂದ ಬರಲಿದ್ಯಾ ಅದೃಷ್ಟ.. dreams

dreams: ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ಕನಸುಗಳು ಬಹಳ ಮುಖ್ಯ. ಕನಸಿನಲ್ಲಿ ಗಿಳಿ, ಗೂಬೆ, ನವಿಲು ಮುಂತಾದ…

ಪ್ರತಿದಿನ ಊಟಕ್ಕೆ ಗರಿಗರಿ ಹಪ್ಪಳ ಬೇಕಾ? ಹಾಗಿದ್ರೆ ಆರೋಗ್ಯ ಬಗ್ಗೆ ಇರಲಿ ಎಚ್ಚರ..papad

papad: ಹಪ್ಪಳಗಳನ್ನು ಊಟದಲ್ಲಿ ರುಚಿ ಇರಲಿ ಎಂಬ ಕಾರಣಕ್ಕೆ ಬಳಸುತ್ತಾರೆ. ಹಾಗಾಗಿ ಊಟಕ್ಕೆ ರುಚಿ ಇದೆ…

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…