More

    ಫಸಲ್ ಬಿಮಾದಡಿ ಲೋಪ ಸರಿಪಡಿಸಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಸೂಚನೆ

    ದಾವಣಗೆರೆ: ಮುಂಗಾರು ಹಂಗಾಮಿನ ಫಸಲ್ ಬಿಮಾ ಯೋಜನೆಯಡಿ ಬೆಳೆ ಕಟಾವು ಪ್ರಾಯೋಗಿಕ ಪರೀಕ್ಷೆಯಲ್ಲಿ ಕೆಲವು ವ್ಯತ್ಯಾಸಗಳಾಗಿವೆ. ಇವುಗಳನ್ನು ಸರಿಪಡಿಸಿ ರೈತರಿಗೆ ಬೆಳೆ ವಿಮಾ ಪರಿಹಾರ ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ತಿಳಿಸಿದರು.
    ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೃಷಿ ವಿಮಾ ಕಂಪನಿ ಅಧಿಕಾರಿಗಳು, ಕೃಷಿ ಅಧಿಕಾರಿಗಳು ಹಾಗೂ ಸಾಂಖ್ಯಿಕ ಅಧಿಕಾರಿಗಳೊಂದಿಗೆ ಮಂಗಳವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಮುಂಗಾರು ಹಂಗಾಮಿನಲ್ಲಿ ಫಸಲ್ ಬಿಮಾ ಯೋಜನೆಯಡಿ ವಿಮಾ ಕಂತು ಪಾವತಿಸಿದ ರೈತರಿಗೆ ಪರಿಹಾರ ನೀಡಲು ಜಿಲ್ಲೆಯಲ್ಲಿ 40 ಬೆಳೆ ಕಟಾವು ಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ 17 ಕಡೆಗಳ ಪ್ರಾಯೋಗಿಕ ಪರೀಕ್ಷೆ ನಡೆಸಿ ಅಪ್‌ಲೋಡ್ ಮಾಡಿದ ಕೆಲವು ವಿಡಿಯೋಗಳಲ್ಲಿನ ಅಂಶಗಳ ಬಗ್ಗೆ ವಿಮಾ ಕಂಪನಿಯ ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದು ಇವುಗಳ ಬಗ್ಗೆ ಪರಿಶೀಲನೆ ನಡೆಸಿ ಇತ್ಯರ್ಥ ಮಾಡಲಾಯಿತು ಎಂದು ತಿಳಿಸಿದರು.
     ಕೆಲವೊಂದು ಪ್ರಯೋಗಗಳಲ್ಲಿ ನಿಗದಿತ ಸರ್ವೆ ನಂಬರ್ ಬದಲಾಗಿ ಬೇರೆ ಸರ್ವೆ ನಂಬರ್‌ನಲ್ಲಿ ಬೆಳೆ ಕಟಾವು ಪರೀಕ್ಷೆಗಳನ್ನು ಮಾಡಲಾಗಿದೆ. ಇದು ಮಳೆಯಾಶ್ರಿತ ಅಥವಾ ನೀರಾವರಿ ಆಶ್ರಿತವೋ ಎಂಬ ಬಗ್ಗೆ ವಿಮಾ ಕಂಪನಿ ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದರು. ನೀರಾವರಿ ಅಧಿಸೂಚಿತ ಪ್ರದೇಶವಲ್ಲ ಎಂದು ಸ್ಪಷ್ಟಪಡಿಸಲಾಗಿತ್ತು.
    ಜಿಲ್ಲೆಯಲ್ಲಿ ಶೇ 70 ಕ್ಕಿಂತ ಅಧಿಕ ಮಳೆಯ ಕೊರತೆಯಾಗಿದ್ದು ಶತಮಾನದಲ್ಲಿಯೇ ಅತ್ಯಂತ ಭೀಕರ ಬರಗಾಲವಾಗಿದೆ. ಆಗಸ್ಟ್‌ನಲ್ಲಿ ಎಷ್ಟು ಮಳೆ ಬರಬೇಕಾಗಿತ್ತು, ಅದರಲ್ಲಿ ತೀವ್ರ ಕೊರತೆ ಉಂಟಾಗಿದ್ದರಿಂದ ಜಿಲ್ಲೆಯಾದ್ಯಂತ ಬೆಳೆಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ವಿಮಾ ಕಂಪನಿಯ ಅಧಿಕಾರಿಗಳಿಗೆ ಸ್ಪಷ್ಟಪಡಿಸಿದರು. ರೈತರ ಹಿತದೃಷ್ಟಿಯಿಂದ ಕೆಲಸ ಮಾಡಬೇಕೆಂದು ತಿಳಿಸಿದರು.
    ಸಭೆಯಲ್ಲಿ ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್,  ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್‌ಭಾನು ಎಸ್.ಬಳ್ಳಾರಿ, ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್, ವಿಮಾ ಕಂಪನಿ ವಲಯಾಧಿಕಾರಿ ಕೃಷ್ಣರಾಜ, ಸಾಂಖ್ಯಿಕ ಅಧಿಕಾರಿ ನೀಲಾ, ತೋಟಗಾರಿಕೆ ಇಲಾಖೆ ಡಿಡಿ ಡಾ. ರಾಘವೇಂದ್ರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts