ದಾವಣಗೆರೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿಗಳು ವಿದ್ಯುನ್ಮಾನ ಮಾಧ್ಯಮ, ಡಿಜಿಟಲ್ ವೇದಿಕೆಗಳಲ್ಲಿ ಜಾಹೀರಾತು ನೀಡಲು ಜಿಲ್ಲಾ ಎಂ.ಸಿ.ಎಂ.ಸಿ ಸಮಿತಿ ಅನುಮೋದನೆ ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
ಈ ಸಮಿತಿಯು ರಾಜಕೀಯ ಪಕ್ಷ, ಅಭ್ಯರ್ಥಿಗಳ ರಾಜಕೀಯ ಜಾಹೀರಾತುಗಳನ್ನು ಪ್ರಸಾರ ಪೂರ್ವದಲ್ಲಿ ದೃಢೀಕರಣ ನೀಡಲಿದೆ. ಕಾಸಿಗಾಗಿ ಸುದ್ದಿಯ ಮೇಲ್ವಿಚಾರಣೆ ಹಾಗೂ ತಡೆಯಲು ಕ್ರಮಗಳನ್ನು ಜರುಗಿಸಲಿದೆ. ಮಾಧ್ಯಮದಲ್ಲಿ ಪ್ರಸಾರವಾಗುವ ಸುಳ್ಳು ಸುದ್ದಿ, ದ್ವೇಷ ಭಾಷಣದ ಮೇಲೆ ನಿಗಾವಹಿಸಿ ವರದಿ ಸಂಗ್ರಹಿಸುವ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಜಾಹೀರಾತುಗಳ ಮೇಲೆ ಮೇಲ್ವಿಚಾರಣೆ ಮಾಡಲಿದೆ ಎಂದು ಹೇಳಿದ್ದಾರೆ.
ಈ ಸಮಿತಿಯು ರಾಜಕೀಯ ಪಕ್ಷ, ಅಭ್ಯರ್ಥಿಗಳ ರಾಜಕೀಯ ಜಾಹೀರಾತುಗಳನ್ನು ಪ್ರಸಾರ ಪೂರ್ವದಲ್ಲಿ ದೃಢೀಕರಣ ನೀಡಲಿದೆ. ಕಾಸಿಗಾಗಿ ಸುದ್ದಿಯ ಮೇಲ್ವಿಚಾರಣೆ ಹಾಗೂ ತಡೆಯಲು ಕ್ರಮಗಳನ್ನು ಜರುಗಿಸಲಿದೆ. ಮಾಧ್ಯಮದಲ್ಲಿ ಪ್ರಸಾರವಾಗುವ ಸುಳ್ಳು ಸುದ್ದಿ, ದ್ವೇಷ ಭಾಷಣದ ಮೇಲೆ ನಿಗಾವಹಿಸಿ ವರದಿ ಸಂಗ್ರಹಿಸುವ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಜಾಹೀರಾತುಗಳ ಮೇಲೆ ಮೇಲ್ವಿಚಾರಣೆ ಮಾಡಲಿದೆ.
ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಟಿ.ವಿ, ಕೇಬಲ್ ಟಿವಿ, ಆಕಾಶವಾಣಿ, ಎಫ್.ಎಂ, ಇ-ನ್ಯೂಸ್ ಪತ್ರಿಕೆ, ರೇಡಿಯೋ, ವಾಯ್ಸ ಎಸ್.ಎಂ.ಎಸ್, ಬಲ್ಕ್ ಎಸ್.ಎಂ.ಎಸ್, ಸಿನಿಮಾ ಹಾಲ್, ಡಿಜಿಟಲ್ ಡಿಸ್ಪ್ಲೆ, ಯುಟೂಬ್, ವೆಬ್ಸೈಟ್ಸ್, ಸಾಮಾಜಿಕ ಜಾಲತಾಣ ವೆಬ್ಸೈಟ್ನಲ್ಲಿ ಜಾಹೀರಾತು ನೀಡಲು ಎಂ.ಸಿ.ಎಂ.ಸಿ.ಯಿಂದ ನೀಡುತ್ತಿರುವ ಜಾಹಿರಾತಿಗೆ ಪ್ರಸಾರಕ್ಕೂ ಮುನ್ನ ಪೂರ್ವಾನುಮತಿ ಪಡೆಯಬೇಕು.
ಅನುಮತಿಗಾಗಿ ಅನುಬಂಧ-ಎ ರಡಿ ಅನುಮತಿ ಪಡೆಯಬೇಕು. ಅನುಮತಿಗಾಗಿ ಅರ್ಜಿಯೊಂದಿಗೆ ಪ್ರಸಾರ ಮಾಡಲು ಉದ್ದೇಶಿಸಿರುವ ಯಥಾವತ್ತು ಜಾಹಿರಾತು ಅನುವಾದ ಮಾಡಿದ ಬೆರಳಚ್ಚು ಮಾಡಿದ ದೃಢೀಕೃತ ಎರಡು ಪ್ರತಿ ಮತ್ತು ಎರಡು ಸಿಡಿ ಅಥವಾ ಪೆನ್ಡ್ರೈವ್ನಲ್ಲಿ ಜಾಹೀರಾತನ್ನು ಹಾಕಿ ನೀಡಬೇಕು.
ಪಕ್ಷಗಳು ಮತ್ತು ಅಭ್ಯರ್ಥಿಗಳು ರಾಜಕೀಯ ಜಾಹೀರಾತು ಪ್ರಸಾರಕ್ಕೂ ಮೂರು ದಿನ ಮುನ್ನ ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ಇತರೆ ವ್ಯಕ್ತಿಗಳು, ನೊಂದಾಯಿತವಲ್ಲದ ಪಕ್ಷಗಳಾಗಿದ್ದಲ್ಲಿ ಜಾಹೀರಾತು ಪ್ರಸಾರಕ್ಕೆ ಉದ್ದೇಶಿಸಿದ 7 ದಿನ ಮೊದಲು ಅರ್ಜಿ ಸಲ್ಲಿಸಬೇಕು. ಎರಡು ದಿನಗಳಲ್ಲಿ ಸಮಿತಿ ಪರಿಶೀಲಿಸಿ ಅರ್ಜಿ ಇತ್ಯರ್ಥ ಮಾಡಲಿದೆ.
ಚುನಾವಣಾ ಸಂದರ್ಭದಲ್ಲಿ ರಾಜಕೀಯ ಜಾಹೀರಾತುಗಳನ್ನು ಮುದ್ರಣ ಮಾಧ್ಯಮದಲ್ಲಿ ನೀಡಲು ಯಾವುದೇ ಪೂರ್ವ ಅನುಮತಿ ಅಗತ್ಯವಿಲ್ಲ. ಆದರೆ ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚಿತವಾಗಿ ಮತದಾನ ಮುಂಚಿನ ದಿನ ಹಾಗೂ ಮತದಾನ ದಿನ ಜಾಹೀರಾತು ಪ್ರಕಟಿಸಲು ಮುದ್ರಣ ಮಾಧ್ಯಮದಲ್ಲಿ ಮಾತ್ರ ಅನುಬಂಧ-ಸಿ ರಡಿ ಜಾಹಿರಾತು ಮುದ್ರಿಸುವ ಎರಡು ದಿನಗಳ ಮುಂಚಿತವಾಗಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.