ಶ್ರೀಲಂಕಾ ವಿರುದ್ಧ ಬೆಂಗಳೂರಿನಲ್ಲಿ ಅಹರ್ನಿಶಿ ಟೆಸ್ಟ್, ಪಿಂಕ್​ ಬಾಲ್​ ಪಂದ್ಯಕ್ಕೆ ಚಿನ್ನಸ್ವಾಮಿ ಆತಿಥ್ಯ

ಬೆಂಗಳೂರು: ಎಲ್ಲವೂ ಬಿಸಿಸಿಐ ಯೋಜನೆಯಂತೆಯೇ ನಡೆದರೆ ಮುಂದಿನ ತಿಂಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೊಚ್ಚಲ ಅಹರ್ನಿಶಿ ಟೆಸ್ಟ್ ಪಂದ್ಯ ನಡೆಯಲಿದೆ. ಪ್ರವಾಸಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಈ ಪಿಂಕ್ ಬಾಲ್ ಪಂದ್ಯವನ್ನು ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಆತಿಥೇಯ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಇದನ್ನು ಖಚಿತಪಡಿಸಿದೆ. ಹಾಲಿ ವೇಳಾಪಟ್ಟಿಯ ಪ್ರಕಾರ, ಫೆಬ್ರವರಿ 25ರಿಂದ ಬೆಂಗಳೂರಿನಿಂದಲೇ ಟೆಸ್ಟ್ ಸರಣಿ ಆರಂಭಗೊಳ್ಳಬೇಕಿತ್ತು ಮತ್ತು ಸರಣಿಯ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಮಾರ್ಚ್ 5ರಿಂದ ಮೊಹಾಲಿಯಲ್ಲಿ ನಡೆಯಬೇಕಿತ್ತು. … Continue reading ಶ್ರೀಲಂಕಾ ವಿರುದ್ಧ ಬೆಂಗಳೂರಿನಲ್ಲಿ ಅಹರ್ನಿಶಿ ಟೆಸ್ಟ್, ಪಿಂಕ್​ ಬಾಲ್​ ಪಂದ್ಯಕ್ಕೆ ಚಿನ್ನಸ್ವಾಮಿ ಆತಿಥ್ಯ