ಭೋಪಾಲ್: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಲಗುತ್ತಿರುವ ಪಂಚರಾಜ್ಯ ಚುನಾವಣೆಯ ಫಲಿತಾಂಶ ಡಿಸೆಂಬರ್ 03ರಂದು ಹೊರಬೀಳಲಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ತಮ್ಮ ಪಕ್ಷ ಗೆದ್ದು ಸರ್ಕಾರ ರಚಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.
ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ಒಂದು ಹೆಜ್ಜೆ ಮುಂದೆ ಎಂಬಂತೆ ಸಂಭಮಿಸುತ್ತಿದ್ದು, ಕಾಂಗ್ರೆಸ್ ಕಚೇರಿ ಎದುರು ದೊಡ್ಡ ಬ್ಯಾನರ್ಗಳನ್ನು ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಇದನ್ನೂ ಓದಿ: ಮಿಜೋರಾಂ ವಿಧಾನಸಭೆ ಚುನಾವಣೆ; ಮತ ಎಣಿಕೆ ಮುಂದೂಡಿದ ಚುಣಾವಣಾ ಆಯೋಗ
ಭೋಪಾಲ್ನಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗ ಮುಂದಿನ ಮುಖ್ಯಮಂತ್ರಿ ಕಮಲ್ನಾಥ್ ಎಂಬ ಬ್ಯಾನರ್ ಹಾಕಲಾಗಿದ್ದು, ಚುನಾವಣೆಯ ಗೆಲುವಿಗೂ ಮುನ್ನವೇ ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ಚರ್ಚೆಯನ್ನು ಹುಟ್ಟುಹಾಕಿದೆ. ಈ ರೀತಿಯ ಅತಿರೇಕದ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹಲವು ಕಾಂಗ್ರೆಸ್ ನಾಯಕರು ಪರೋಕ್ಷವಾಗಿ ಕಿಡಿಕಾರಿದ್ದಾರೆ.
230 ಸದ್ಯಬಲದ ಮಧ್ಯಪ್ರದೇಶದ ವಿಧಾನಸಭೆಗೆ ನವೆಂಬರ್ 17ರಂದು ಮತದಾನ ನಡೆದಿದ್ದು, ಡಿಸೆಂಬರ್ 03ರಂದು ಫಲಿತಾಂಶ ಹೊರಬೀಳಲಿದೆ. ಈಗಾಗಲೇ ಎಕ್ಸಿಟ್ ಪೋಲ್ ಫಲಿತಾಂಶ ಬೊಇಡುಗಡೆಯಾಗಿದ್ದು, ಕೆಲವು ಬಿಜೆಪಿ, ಕೆಲವು ಕಾಂಗ್ರೆಸ್ ಹಾಗೂ ಇನ್ನೂ ಕೆಲವು ಅತಂತ್ರ ವಿಧಾನಸಬೆ ನಿರ್ಮಾಣವಾಗಲಿದೆ ಎಂದು ಭೌಇಷ್ಯ ನುಡಿದಿವೆ.