More

    ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗಷ್ಟೇ ಶಾಪ್ ಓಪನ್

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಜುಲೈ 29ರಿಂದ ಆಗಸ್ಟ್ 1ರವರೆಗೆ ಎಲ್ಲ ಅಂಗಡಿ, ವ್ಯಾಪಾರ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೇ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ನೀಡಿದ್ದಾರೆ.

    ಈ ಅವಧಿಯಲ್ಲಿ ಬೆಳ್ಳಗ್ಗೆ 6 ಗಂಟೆಗೆ ಅಂಗಡಿಗಳನ್ನು ತೆರೆದು, ಸಂಜೆ 6 ಗಂಟೆಗೆ ಮುಚ್ಚಬೇಕು ಎಂದು ವ್ಯಾಪಾರಿಗಳಗೆ ಸೂಚನೆ ನೀಡಲಾಗಿದೆ. ಇದರ ಅನುಷ್ಠಾನ ಹೊಣೆಯನ್ನು ಆಯಾಯ ಸ್ಥಳೀಯಾಡಳಿತ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ವಹಿಸಲಾಗಿದೆ.

    ಆಸ್ಪತ್ರೆ, ಔಷಧ ಅಂಗಡಿಗಳು ಮತ್ತಿತರ ತುರ್ತು ಸೇವೆಗಳಿಗೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ ಎಂದೂ ಜಿಲ್ಲಾಧಿಕಾರಿಗಳ ಪ್ರಕಟಣೆ ಸ್ಪಷ್ಟಪಡಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts