More

    ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ

    ವಿಜಯಪುರ: ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋತ್ಸವವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆವರಣದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ತಿಳಿಸಿದರು.
    ತಮ್ಮ ಕಚೇರಿ ಸಭಾಂಗಣದಲ್ಲಿ ಗಣರಾಜೋತ್ಸವ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಹಿಳಾ ವಿವಿಯಲ್ಲಿ ಜ.26ರಂದು ಬೆಳಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಗುವುದು. ಧ್ವಜಾರೋಹಣ ಕಾರ್ಯಕ್ರಮದ ವೇದಿಕೆ ನಿರ್ಮಾಣ, ಆಸನಗಳ ವ್ಯವಸ್ಥೆ ಹಾಗೂ ಪೂರಕವಾಗಿ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
    ಹಿರಿಯ ನಾಗರಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡುವುದು. ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಂದೇಶದ ನಂತರ ಸಂವಿಧಾನದ ಪ್ರಸ್ತಾವನೆಯನ್ನು ಓದಿ ಹೇಳಲು ತೀರ್ಮಾನ ಕೈಗೊಳ್ಳುವುದು, ಧ್ವಜಸ್ಥಂಭವನ್ನು ಸಜ್ಜುಗೊಳಿಸುವುದು, ಶಿಸ್ತಿನ ಪಥಸಂಚಲನ ವ್ಯವಸ್ಥೆ ಮಾಡುವ ಕುರಿತು ಅಧಿಕಾರಿಗೆ ತಿಳಿಸಿದರು.
    ವಿಜಯಪುರ ನಗರದ ಪ್ರಮುಖ ವೃತ್ತಗಳಿಗೆ ವಿದ್ಯುತ್ ದೀಪಗಳಿಂದ ಶೃಂಗರಿಸುವುದು. ಸರ್ಕಾರಿ ಕಚೇರಿ, ವಿಶ್ವವಿದ್ಯಾಲಯ ಸ್ವಚ್ಛತೆಯನ್ನು ಕೈಗೊಳ್ಳುವ ಬಗ್ಗೆ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
    ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಅಗತ್ಯವಿರುವ ವೈದ್ಯಕೀಯ ಸಿಬ್ಬಂದಿ ಮತ್ತು ಆಂಬುಲೆನ್ಸ್ ವ್ಯವಸ್ಥೆ ಮಾಡುವುದು, ಆವರಣದಲ್ಲಿ ಪ್ರವೇಶಿಸುವ ವ್ಯಕ್ತಿಗಳಿಗೆ ಥರ್ಮಲ್ ಸ್ಕ್ರೀನಿಂಗ್, ಕೈಗಳಿಗೆ ಸ್ಯಾನಿಟೈಸರ್ ಮಾಡಲು ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts