ಧಾರವಾಡ ನೂತನ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಅವರು ಇಲ್ಲಿನ ಶ್ರೀ ಸಿದ್ಧಾರೂಢ ಮಠಕ್ಕೆ ಬುಧವಾರ ಭೇಟಿ ನೀಡಿ, ಶ್ರೀ ಸಿದ್ಧಾರೂಢರ ಹಾಗೂ ಶ್ರೀ ಗುರುನಾಥರೂಢರ ಗದ್ದುಗೆ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶ್ರೀಮಠದ ಟ್ರಸ್ಟ್ ಕಮೀಟಿ ವತಿಯಿಂದ ಜಿಲ್ಲಾಧಿಕಾರಿ ಅವರನ್ನು ಸನ್ಮಾನಿಸಲಾಯಿತು. ಕಮೀಟಿ ಚೇರ್ಮನ್ ಬಸವರಾಜ ಕಲ್ಯಾಣಶೆಟ್ಟರ, ವೈಸ್ ಚೇರ್ಮನ್ ಉದಯಕುಮಾರ ನಾಯ್ಕ, ಗೌರವ ಕಾರ್ಯದರ್ಶಿ ಸರ್ವಮಂಗಳಾ, ಧರ್ಮದರ್ಶಿ ಡಾ. ಗೋವಿಂದ ಮಣ್ಣೂರ, ಮ್ಯಾನೇಜರ್ ಈರಣ್ಣ ತುಪ್ಪದ ಹಾಗೂ ಇತರರು ಇದ್ದರು.