More

    ಡಿಸಿಸಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

    ಬೆಳಗಾವಿ: ಡಿಸಿಸಿ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ಮೊದಲ ದಿನ ರಾಮದುರ್ಗ ತಾಲೂಕಿನ ಕಟಕೋಳ ಪಿಕೆಪಿಎಸ್‌ನಿಂದ ಶ್ರೀಕಾಂತ ಎಸ್. ಧವನ ಎಂಬುವರು ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.

    ಜಿಲ್ಲಾಡತಳಿ ಡಿಸಿಸಿ ಬ್ಯಾಂಕ್ ಮತದಾರರ ಪಟ್ಟಿಯನ್ನು ಬುಧವಾರ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆಯಿಂದಲೇ ಬಿಜೆಪಿ, ಕಾಂಗ್ರೆಸ್ ಸಭೆಗಳು ನಡೆಯುತ್ತಿವೆ. ಕೆಲ ತಾಲೂಕಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಹಿಂದೇಟು ಹಾಕುತ್ತಿದ್ದಾರೆ.

    ನ. 29 ನಾಮಪತ್ರ ಸಲ್ಲಿಸಲು ಕೊನೇ ದಿನ. ಅಂದೇ ಸ್ಪಷ್ಟ ಚಿತ್ರಣ ತಿಳಿಯಲಿದೆ. ಪ್ರತಿ ತಾಲೂಕಿನ ಪಿಕೆಪಿಎಸ್ ಪ್ರತಿನಿಧಿಸುವ ಪ್ರತಿನಿಧಿ ಗಳು, ಹತ್ತು ತಾಲೂಕು ಕೃಷಿ ಹುಟ್ಟುವಳಿ ಮಾರಾಟ ಸಹಕಾರ ಸಂಘ, ಗ್ರಾಹಕರ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಕೃಷಿಯೇತರ ಪತ್ತಿನ ಸಹಕಾರ ಸಂಘ, ಹಾಲು ಉತ್ಪಾದಕರ ಸಹಕಾರ ಸಂಘಗಳು, ಕೈಗಾರಿಕಾ ಸಹಕಾರ ಸಂಘಗಳು, ನೇಕಾರ ಸಹಕಾರ ಸಂಘಗಳಿಂದ ತಲಾ ಒಬ್ಬರಂತೆ ಒಟ್ಟು 16 ನಿರ್ದೇಶಕರ ಸ್ಥಾನಗಳಿಗೆ ಆಯ್ಕೆ ನಡೆಯಲಿದೆ.

    ಆಯ್ಕೆಗೊಂಡ ನಿರ್ದೇಶಕರು ಸೇರಿಕೊಂಡು ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ. ನಿರ್ದೇಶಕರ ಸದಸ್ಯರ ಅವಧಿ ಐದು ವರ್ಷಗಳವರೆಗೆ ಇರುತ್ತದೆ. ನ. 6ರಂದು ನಗರದ ಬಿ.ಕೆ. ಮಾಡಲ್ ಪ್ರೌಢ ಶಾಲೆಯಲ್ಲಿ ಮತದಾನ ನಡೆಯಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts