ಬೆಂಗಳೂರು: ಬಿಜೆಪಿ ಆಡಳಿತವಿದ್ದಾಗ ಆ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಬಂದಾಗ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಟೀಕೆಗೆ ಗುರಿಯಾಗಿದ್ದರು. ಆಗ ಅವರ ಫೋಟೋದೊಂದಿಗೆ ಪೇಟಿಎಂ ಮಾದರಿಯಲ್ಲಿ ಪೇಸಿಎಂ ಎಂಬ ಪೋಸ್ಟರ್ ರಚಿಸಿ ಕಾಂಗ್ರೆಸ್ ಎಲ್ಲೆಡೆ ಅಂಟಿಸಿ, ಹರಿಬಿಟ್ಟು ಸಂಚಲನ ಸೃಷ್ಟಿಸಿತ್ತು.
ಇದೀಗ ಅದೇ ಮಾದರಿಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ತಿರುಗಿಬಿದ್ದಿದ್ದು, ಉಪ ಮುಖ್ಯಮಂತ್ರಿ ಅವರನ್ನೇ ಕಾಣೆ ಆಗಿಸಿದೆ. ಅರ್ಥಾತ್, ‘ಡಿ.ಕೆ.ಶಿವಕುಮಾರ್ ಕಾಣೆಯಾಗಿದ್ದಾರೆ, ದಯವಿಟ್ಟು ಹುಡುಕಿಕೊಂಡಿ’ ಎಂದು ಕಾಣೆಯಾದವರ ಜಾಹೀರಾತು ಮಾದರಿಯಲ್ಲಿ ಪೋಸ್ಟರ್ ರಚಿಸಿ ಹರಿಬಿಟ್ಟು ತಿರುಗೇಟು ನೀಡಿದೆ.
ಇದನ್ನೂ ಓದಿ: ಹೈ ಅಲರ್ಟ್: ವಿದ್ಯಾರ್ಥಿಗಳ ಮೇಲೆ ಅಪರಿಚಿತರಿಂದ ವಿಚಿತ್ರ ಲಿಕ್ವಿಡ್ ಸ್ಪ್ರೇ!; ಮೈಗೆ ತಾಕುತ್ತಿದ್ದಂತೆ ಅಲರ್ಜಿ..
“ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ‘ದೊಡ್ಡಮಟ್ಟದಲ್ಲಿ ಸಹಕರಿಸಿದ’ ಋಣವನ್ನು ತೀರಿಸಲು ಹಾಗೂ ಲೋಕಸಭಾ ಚುನಾವಣೆಯ ಬಳಿಕ ಸಿಎಂ ಕುರ್ಚಿಗೆ ಲಾಬಿ ಮಾಡಲು, ಕಾವೇರಿಯನ್ನು ಸ್ಟಾಲಿನ್ ನಾಡಿಗೆ ಬೇಕಾಬಿಟ್ಟಿಯಾಗಿ ಹರಿಬಿಟ್ಟು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನಾಪತ್ತೆಯಾಗಿದ್ದಾರೆ, ದಯವಿಟ್ಟು ಹುಡುಕಿಕೊಡಿ..” ಎಂದು ಡಿ.ಕೆ.ಶಿವಕುಮಾರ್ ಫೋಟೋ ಇರುವ ಪೋಸ್ಟರ್ನೊಂದಿಗೆ ಬಿಜೆಪಿ ವಾಗ್ದಾಳಿ ನಡೆಸಿದೆ.
ಇದನ್ನೂ ಓದಿ: ಹಮಾಸ್ ದಾಳಿ: ಐವರು ಹಂತಕರನ್ನು ಸ್ವತಃ ಕೊಂದ ಎದೆಗಾತಿ; 20 ಉಗ್ರರ ಹತ್ಯೆಗೆ ನೇತೃತ್ವ ವಹಿಸಿದ ದಿಟ್ಟ ಯುವತಿ!
ಈ ಮೂಲಕ ಕಾಂಗ್ರೆಸ್-ಬಿಜೆಪಿ ನಡುವಿನ ಸಂಘರ್ಷ ಮತ್ತೊಂದು ಮಜಲಿಗೆ ತಲುಪಿದ್ದು, ಎರಡೂ ಪಕ್ಷಗಳು ಪರಸ್ಪರ ದೋಷಾರೋಪಣೆಗೆ ವಿಭಿನ್ನ, ವಿನೂತನ ತಂತ್ರಗಳನ್ನು ಹೆಣೆಯುತ್ತಿವೆ. ಪರಿಣಾಮವಾಗಿ, ರಾಜಕೀಯ ಆರೋಪ-ಪ್ರತ್ಯಾರೋಪಗಳು ತೀವ್ರವಾಗಿ ವ್ಯಕ್ತವಾಗುತ್ತಿದ್ದು, ಇದಕ್ಕೆ ಆಯಾಪಕ್ಷಗಳ ಬೆಂಬಲಿಗರೂ ದನಿಗೂಡಿಸುತ್ತಿರುವ ಮೂಲಕ, ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗುತ್ತಿದೆ.
ಡಿಯರ್ @INCKarnataka,
ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ‘ದೊಡ್ಡಮಟ್ಟದಲ್ಲಿ ಸಹಕರಿಸಿದ’ ಋಣವನ್ನು ತೀರಿಸಲು ಹಾಗೂ ಲೋಕಸಭಾ ಚುನಾವಣೆಯ ಬಳಿಕ ಸಿಎಂ ಕುರ್ಚಿಗೆ ಲಾಬಿ ಮಾಡಲು, ಕಾವೇರಿಯನ್ನು ಸ್ಟಾಲಿನ್ ನಾಡಿಗೆ ಬೇಕಾಬಿಟ್ಟಿಯಾಗಿ ಹರಿಬಿಟ್ಟು ಜಲಸಂಪನ್ಮೂಲ ಸಚಿವ @DKShivakumar ಅವರು ನಾಪತ್ತೆಯಾಗಿದ್ದಾರೆ.
ದಯವಿಟ್ಟು ಹುಡುಕಿಕೊಡಿ. pic.twitter.com/tXovOiqlpG
— BJP Karnataka (@BJP4Karnataka) October 12, 2023
ಭಿಕ್ಷೆ ಬೇಡುತ್ತಿದ್ದ ವಿದೇಶಿ ಮಹಿಳೆಯ ಬದುಕು ಬದಲಿಸಿದ ಭಾರತೀಯ; ಯಾರೀಕೆ, ಈಗೇನು ಮಾಡುತ್ತಿದ್ದಾರೆ?