More

    ತಾಯಿ ಸಾವಿನ ಸುದ್ದಿ ನಡುವೆ ಡಿಸಿಪಿ ಕರ್ತವ್ಯಕ್ಕೆ ಹಾಜರ್

    ಹುಬ್ಬಳ್ಳಿ: ತಾಯಿಯ ಸಾವಿನ ಸುದ್ದಿ ನಡುವೆಯೂ ಕರ್ತವ್ಯಕ್ಕೆ ಹಾಜರಾಗಿ ಕಾರ್ಯತತ್ಪರತೆ ಮೆರೆಯುವ ಮೂಲಕ ಇತರರಿಗೆ ಪೊಲೀಸ್ ಅಧಿಕಾರಿಯೊಬ್ಬರು ಮಾದರಿಯಾಗಿದ್ದಾರೆ.
    ಹು-ಧಾ ಪೊಲೀಸ್ ಆಯುಕ್ತಾಲಯದ ಸಶಸ್ತ್ರ ಮೀಸಲು ಪಡೆಯ (ಸಿಎಆರ್) ಡಿಸಿಪಿ ಯಲ್ಲಪ್ಪ ಕಾಶಪ್ಪನವರ ಅವರ ತಾಯಿ ಬುಧವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಇದರ ಸುದ್ದಿ ಮುಟ್ಟಿದ ತಕ್ಷಣ ಹಿರಿಯ ಅಧಿಕಾರಗಳ ಗಮನಕ್ಕೆ ತಂದು ಸವದತ್ತಿಗೆ ತೆರಳಿ ತಾಯಿ ಶಾಂತಮ್ಮನವರ ಅಂತ್ಯ ಸಂಸ್ಕಾರ ನೆರವೇರಿಸಿ ಮರಳಿ ಅಂದೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
    ತಾಯಿ ಅಗಲಿಕೆಯ ನೋವಿನಲ್ಲೂ ಅದೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಪ್ರಚಾರ ಸಭಾ ಕಾರ್ಯಕ್ರಮಕ್ಕೆ ಹಾಜರಾಗಿ, ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಮೆರೆದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts