More

    ತಾಯಿ-ಮಗಳ ಮೃತದೇಹ ಪತ್ತೆ; ಕೊಲೆ ಶಂಕೆ

    ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳ ಮೃತದೇಹ ಪತ್ತೆಯಾಗಿರುವ ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿ-ಮಗಳು ಮೂರು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ರಜೀಯಾ ಸುಲ್ತಾನ್ ಹಾಗೂ ಜಬೀನಾ ಮೃತ ದುರ್ಧೈವಿಗಳು.

    ತಾಯಿ-ಮಗಳ ಕೊಲೆ?

    ಮೃತೆ ರಜೀಯಾ ಸುಲ್ತಾನ ಕಾಲ್ ಸೆಂಟರ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಇದೀಗ ತಾಯಿ ಮತ್ತು ಮಗಳು ಅನುಮಾನಸ್ಪದವಾಗಿ ಸಾವಿಗೀಡಾಗಿದ್ದಾರೆ. ಇಬ್ಬರನ್ನು ಕೊಲೆ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆಯಿಂದ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಿದೆ.

    ಇದನ್ನೂ ಓದಿ: ಮಾದಕ ವಸ್ತು ಸೇವಿಸಲು ಕಳ್ಳತನವನ್ನೇ ಕಸುಬು ಮಾಡಿಕೊಂಡಿದ್ದ ಖತರ್ನಾಕ್ ಜೋಡಿ ಅಂದರ್!

    ಕಾಲೇಜಿನೊಳಗೆ ಚಾಕು ಇರಿತ! ಸ್ಥಳದಲ್ಲೇ ವಿದ್ಯಾರ್ಥಿ ಸಾವು…

    ಬೆಂಗಳೂರು: ಕಾಲೇಜು ಫೆಸ್ಟ್​ನಲ್ಲಿ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ನಡೆದಿದ್ದು ವಿದ್ಯಾರ್ಥಿಯೊಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಬಾಗಲೂರು ಠಾಣಾ ವ್ಯಾಪ್ತಿಯಯಲ್ಲಿ ನಡೆದಿದ್ದು, ಗುಜರಾತ್ ಮೂಲದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ (22) ಮೃತ ದುರ್ಧೈವಿ.

    ಇದನ್ನೂ ಓದಿ: ಸುಡಾನ್​ನಿಂದ ಬಂದವರಲ್ಲಿ ಹಳದಿ ಜ್ವರ? ಲಸಿಕೆ ಪಡೆಯದೇ ಬಂದ 45 ಜನರ ಕ್ವಾರಂಟೈನ್

    ಚೂರಿ ಇರಿತ

    ಕಾಲೇಜು ಫೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಭಾಸ್ಕರ್​ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದೆ. ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲಿಸರು ಭೇಟಿ ನೀಡಿದ್ದು, ಕಾಲೇಜು ಸಿಸಿಟಿವಿ ಪರಿಶೀಲಿಸಿದ್ದಾರೆ. ಪ್ರಕರಣದ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts