More

    ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

    ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

    ಬಳ್ಳಾರಿ ಜಿಲ್ಲೆಯ ವ್ಯಾಸಾಪುರ ತಾಂಡಾದ ಪ್ರಕಾಶ ನಾಯಕ್(25) ಹಾಗೂ ಭಾರತಿಬಾಯಿ ನಾಯಕ (21) ಎಂದು ಗುರುತಿಸಲಾಗಿದೆ. ಮೃತ ದಂಪತಿ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಕಬ್ಬು ಕಟಾವು ಕೆಲಸ ಮಾಡುತ್ತಿದ್ದ ಇವರು ಕೌಟುಂಬಿಕ ಜಗಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಶುಕ್ರವಾರ ತಡರಾತ್ರಿಯಿಂದ ನಾಪತ್ತೆ ಆಗಿದ್ದ ದಂಪತಿ, ಶನಿವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್​ಐ ಶಂಕರಗೌಡ ಪಾಟೀಲ, ಎಎಸ್​ಐ ಎಂ.ಕೆ. ಸೊರಟೂರ, ಸಿಬ್ಬಂದಿ ಬಿ.ಎಚ್. ಕೂರಗುಂದ, ಮಂಜುನಾಥ ಕಡಕೋಳ ಭೇಟಿ ನೀಡಿ ಪರಿಶೀಲಿಸಿದರು. ಈ ಘಟನೆ ಕುರಿತು ಗುತ್ತಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts