More

    ಜಿಲ್ಲಾಸ್ಪತ್ರೆಯಲ್ಲಿ ವಿಚಾರಣಾಧೀನ ಖೈದಿ ಸಾವು

    ಚಿಕ್ಕಮಗಳೂರು: ವಿಚಾರಣಾಧೀನ ಖೈದಿಯೊಬ್ಬ ನಗರದ ಜಿಲ್ಲಾಸ್ಪತ್ರೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಹಾಸನ ಮೂಲದ ಸತೀಶ್ ಮೃತಪಟ್ಟಿರುವ ವಿಚಾರಣಾಧೀನ ಖೈದಿ.
    ದಾಯಾದಿಗಳ ಹೊಡೆದಾಟ ಪ್ರಕರಣದಲ್ಲಿ 7 ವರ್ಷಗಳಿಂದ ನಾಪತ್ತೆಯಾಗಿದ್ದ ಸತೀಶ್ ಪೊಲೀಸರಿಗೆ ಸಿಕ್ಕಿಬಿದ್ದ ಮೂರೇ ದಿನಗಳಲ್ಲಿ ಸಾವನ್ನಪ್ಪಿದ್ದಾನೆ. ಹೀಗಾಗಿ ಕಾರಾಗೃಹ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಅಣ್ಣ -ತಮ್ಮ ಇಬ್ಬರು ಹಣಕಾಸಿನ ವಿಚಾರಕ್ಕೆ ಜಗಳವಾಡಿಕೊಂಡು ದಾಖಲಾಗಿದ್ದ 307 ಕೇಸ್‌ಗೆ ಸಂಬಂಧಿಸಿದಂತೆ ಸತೀಶ್ ಕಳೆದ ಏಳು ವರ್ಷಗಳಿಂದ ನಾಪತ್ತೆಯಾಗಿದ್ದ. ಸತೀಶ್ 7ವರ್ಷಗಳ ಹಿಂದೆ ತನ್ನ ಅಣ್ಣನಾದ ಸಿದ್ದರಾಜು ಎಂಬಾತನ ಹೋಟೆಲ್‌ನಲ್ಲಿ ಕೆಲಸ ಮಾಡುವ ವೇಳೆ ಚಿಕ್ಕಮಗಳೂರಿನ ದಂಟರಮಕ್ಕಿ ಬಳಿ ಹೊಡೆದಾಟ ಮಾಡಿಕೊಂಡಿದ್ದರು. ಬಳಿಕ ಸತೀಶ್ ತಲೆಮರೆಸಿಕೊಂಡಿದ್ದ. ಕಳೆದ ನಾಲ್ಕು ದಿನಗಳ ಹಿಂದೆ ಸತೀಸ್ ಹಾಸನದ ಶ್ರೀನಗರದಲ್ಲಿರುವ ತನ್ನ ಮನೆಯಲ್ಲಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ್ದ ಚಿಕ್ಕಮಗಳೂರು ಪೊಲೀಸರು ಸತೀಶ್‌ನನ್ನು ಬಂಧಿಸಿ ಚಿಕ್ಕಮಗಳೂರಿಗೆ ಕರೆತಂದು ಜೈಲಿಗೆ ಕಳುಹಿಸಿದ್ದರು.
    ಜಾಮೀನು ರಹಿತ ವಾರೆಂಟ್ ನಡಿ ಬಂಧಿಸಿ ನಾಲ್ಕು ದಿನಗಳ ನಂತರ ಹೊಡೆದು ಆಸ್ಪತ್ರೆಗೆ ಸೇರಿಸಿ ಇಂದು ನಮಗೆ ವಿಷಯ ತಿಳಿಸಿದ್ದಾರೆ ಎಂದು ಸತೀಶ್ ಕುಟುಂಬ ಆರೋಪಿಸಿದೆ. ಸತೀಶ್ ಕೈ, ಕುತ್ತಿಗೆ ಹಾಗೂ ದೇಹದಲ್ಲಿ ಗಾಯಗಳು ಕಂಡು ಬಂದಿವೆ. ಕಾರಾಗೃಹ ಹಾಗೂ ಪೊಲೀಸ್ ಸಿಬ್ಬಂದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರಬಹುದು ಎಂದು ಸತೀಶ್ ಪತ್ನಿ ನೇತ್ರ ಅನುಮಾನ ವ್ಯಕ್ತಪಡಿಸಿದ್ದಾರೆ. ವಿಚಾರಣಾಧೀನ ಹಂತದಲ್ಲಿ ಖೈದಿ ಮೃತಪಟ್ಟ ಕಾರಣ ನ್ಯಾಯಾಧೀಶರು ಜಿಲ್ಲಾಸ್ಪತ್ರೆಗೆ ಆಗಮಿಸಿ ಮೃತನ ಕುಟುಂಬಸ್ಥರಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts